Follow Us On

WhatsApp Group
Focus News
Trending

ಈಜಲು ತೆರಳಿದ ವೇಳೆ ಅಲೆಗೆ ಸಿಲುಕಿ ಸಾವು ಬದುಕಿನ ನಡುವೆ ಹೋರಾಟ: ಕೊಚ್ಚಿ ಹೋಗುತ್ತಿದ್ದವನ ರಕ್ಷಣೆ

ಗೋಕರ್ಣ: ಪ್ರವಾಸಕ್ಕೆ ಎಂದು ಬಂದಿದ್ದ ಬೆಂಗಳೂರು ಮೂಲದ ಪ್ರವಾಸಿಗನೋರ್ವ ಕಡಲಲ್ಲಿ ಈಜುತ್ತಿರುವಾಗ ಅಲೆಗೆ ಸಿಲುಕಿ ಸಾವು ಬದುಕಿನ ನಡುವೆ ಹೋರಾಡುತಿದ್ದ. ಈ ವೇಳೆ ಲೈಫ್ ಗಾರ್ಡ್ ರಕ್ಷಿಸಿದ ಘಟನೆ ಗೋಕರ್ಣದ ಮುಖ್ಯ ಕಡಲತೀರದಲ್ಲಿ ನಡೆದಿದೆ.

ಬೆಂಗಳೂರಿನ 24 ವರ್ಷ ವಯೋಮಾನದ ಶ್ರೇಯಸ್ ಅರಸ್ ರಕ್ಷಣೆಗೊಳಗಾದ ಯುವಕ. ಈತ ಬೆಂಗಳೂರಿನಿಂದ ಗೋಕರ್ಣಕ್ಕೆ ನಾಲ್ಕು ಜನರೊಂದಿಗೆ ಪ್ರವಾಸಕ್ಕೆ ಇಂದು ಬಂದಿದ್ದ.

ಈ ವೇಳೆ ಸಮುದ್ರಕ್ಕೆ ಸ್ನೇಹಿತರೊಡನೆ ಶ್ರೇಯಸ್ ಈಜುವಾಗ ಅಲೆಗೆ ಸಿಲುಕಿ ನಿತ್ರಾಣಗೊಂಡಿದ್ದ ಎನ್ನಲಾಗಿದ್ದ. ಇದನ್ನು ಗಮನಿಸಿದ ಲೈಫ್ ಗಾರ್ಡ್ ನಾಗೇಂದ್ರ ಕುರ್ಲೆ ಮತ್ತು ಪ್ರವಾಸಿ ಮಿತ್ರ ಸಿಬ್ಬಂದಿ ರಗುವೀರ ನಾಯ್ಕರವರು ರಕ್ಷಣೆ ಮಾಡಿ, ಜೀವ ಉಳಿಸಿದ್ದಾರೆ.

ವಿಸ್ಮಯ ನ್ಯೂಸ್ ಗೋಕರ್ಣ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button