
ಅಂಕೋಲಾ : ಕಂಪ್ಯೂಟರ್ ಸೈನ್ಸ್ ನಲ್ಲಿ ಇಂಜಿನಿಯರಿಂಗ್ ಪದವಿ ಮುಗಿಸಿ,ಬೆಂಗಳೂರಿನ ಪ್ರತಿಷ್ಠಿತ ಕಂಪನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ತೆಂಕಣಕೇರಿ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಗೌತಮ ಪ್ರಭಾಕರ ನಾಯ್ಕ(24) ಮೃತ ದುರ್ದೈವಿಯಾಗಿದ್ದು, ಮನೆಯಲ್ಲಿ ಯಾರು ಇರದ ವೇಳೆ ಅದಾವುದೋ ಕಾರಣದಿಂದ ಮಾನಸಿಕವಾಗಿ ನೊಂದು ನೇಣಿಗೆ ಶರಣಾಗಿದ್ದಾನೆ ಎನ್ನಲಾಗಿದೆ.

ಕೋವಿಡ್ ಲಾಕ್ಡೌನ್ ಕಾರಣ ಮನೆಯಿಂದಲೇ ಕಂಪನಿ ಕೆಲಸ ( ವರ್ಕ್ ಪ್ರಾಂ ಹೋಂ) ಮಾಡುತ್ತಿದ್ದು, ಸಾವಿಗೆ ಶರಣಾಗುವ ಪೂರ್ವವೂ ಕೆಲ ಹೊತ್ತು ಕಾರ್ಯ ನಿರ್ವಹಿಸಿದಂತಿದೆ ಎನ್ನುವುದು ಕೆಲ ಸ್ಥಳೀಯರ ಅಭಿಪ್ರಾಯವಾಗಿದೆ. ಮೃತ ಗೌತಮ ಶಾಂತ ಸ್ವಭಾವದ ಯುವಕ ನಾಗಿದ್ದು, ತಾನಾಯಿತು ತನ್ನ ಕೆಲಸವಾಯಿತು ಎಂಬಂತೆ ಇರುತ್ತಿದ್ದು, ಆತನ ಆಕಸ್ಮಿಕ ನಿಧನದ ಸುದ್ದಿಗೆ ಊರಲ್ಲಿ ನೀರವ ಮೌನ ಆವರಿಸಿದಂತಿದೆ.
ಮೃತನ ತಾಯಿ ಶಿಕ್ಷಣ ಇಲಾಖೆಯಲ್ಲಿ ಸಿ. ಆರ್. ಪಿ.ಯಾಗಿ ಸೇವೆ ಸಲ್ಲಿಸುತ್ತಿದ್ದು,ಈ ಹಿಂದಿನ ಕಹಿ ಘಟನೆ ಮರೆತು, ಪತಿಯ ಸಾವಿನ ದುಃಖ ಮರೆಯುವ ಮುನ್ನವೇ,ಮುದ್ದಿನ ಮಗನನ್ನು ಕಳೆದುಕೊಂಡು ರೋದಿಸುವಂತಾಗಿರುವುದು ವಿಪರ್ಯಾಸವೇ ಸರಿ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ತಾಲೂಕಾ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದ್ದು, ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಬೃಹತ್ ಶೋರೂಮ್ ಬ್ರೌನ್ವುಡ್ ನಲ್ಲಿ 12 ಉದ್ಯೋಗಾವಕಾಶಗಳು: ಇಂದೇ ಸಂಪರ್ಕಿಸಿ
- ವಿದ್ಯಾರ್ಥಿಗಳಿಗೆ ಭಗವದ್ಗೀತೆ ನೀಡಿ ಭವಿಷ್ಯಕ್ಕೆ ಶುಭ ಕೋರಿದ ಪ್ರಮುಖ ಸೌಹಾರ್ದ ಸಹಕಾರಿ
- ಉತ್ತಮ ಭವಿಷ್ಯ ರೂಪಿಸಿಕೊಳ್ಳಲು, ಈಗಿನಿಂದಲೇ ಸಮಯಕ್ಕೆ ಮಹತ್ವ ನೀಡಿ : ಡಾ. ಗಣೇಶ ನಾಗ್ವೇಕರ ಕಲಾ ಮತ್ತು ವಾಣಿಜ್ಯ ವಿದ್ಯಾಲಯದಲ್ಲಿ ನಡೆದ ವಾರ್ಷಿಕ ಸಮ್ಮೇಳನ
- ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ಕೇಣಿಯಲ್ಲಿ ಸರ್ವಋತು ಆಳ ಸಮುದ್ರ ಗ್ರೀನ್ಫೀಲ್ಡ್ ಬಂದರಿನ ಅಭಿವೃದ್ಧಿ
- ವಿದ್ಯಾರ್ಥಿ ಸಂಸತ್ ಉದ್ಘಾಟನೆ ಹಾಗೂ ಬರಹ ಪಠ್ಯ ವಿತರಣೆ