ಓಲಂಪಿಕ್ಸ್ ನಲ್ಲಿ ಚಿನ್ನ ಗೆದ್ದು ಇತಿಹಾಸ ಬರೆದ ಅಥ್ಲೀಟ್ ನೀರಜ್ ಛೋಪ್ರಾ ಶಿರಸಿಗೆ ಆಗಮಿಸಿದ್ದು ನಿಜವೇ? ವೈರಲ್ ಫೋಟೋದ ಅಸಲಿಯತ್ತೇನು?
ಶಿರಸಿ: ಓಲಂಪಿಕ್ಸ್ ನಲ್ಲಿ ಚಿನ್ನ ಗೆದ್ದು ಇತಿಹಾಸ ಬರೆದ ಅಥ್ಲೀಟ್ ನೀರಜ್ ಛೋಪ್ರಾ ಅವರು ಉತ್ತರಕನ್ನಡ ಜಿಲ್ಲೆಯ ಶಿರಸಿಗೆ ಆಗಮಿಸಿದ್ದಾರೆ ಎಂಬ ಸುದ್ದಿ ಇಂದು ಕಾಳಿಚ್ಚಿನಂತೆ ಹಬ್ಬಿತ್ತು. ಮೂಲತಃ ಶಿರಸಿಯವರಾದ ತಮ್ಮ ಕೋಚ್ ಕಾಶಿನಾಥ ನಾಯ್ಕ ಅವರ ನಿವಾಸಕ್ಕೆ ಒಲಿಂಪಿಕ್ಸ್ ಚಿನ್ನದ ಹುಡುಗ ನೀರಜ್ ಛೋಪ್ರಾ ಭೇಟಿ ನೀಡಿದ್ದಾರೆ ಎಂದು ಎಲ್ಲೆಡೆ ಸುದ್ದಿಯಾಗಿತ್ತು. ಕಾಶಿನಾಥ ಅವರ ಕುಟುಂಬವು ನೀರಜ್ ಛೋಪ್ರಾ ಅವರನ್ನು ಆತ್ಮೀಯವಾಗಿ ಆರತಿ ಬೆಳಗಿ ಬರಮಾಡಿಕೊಂಡ ಫೋಟೋ ಕೂಡ ವೈರಲ್ ಆಗಿತ್ತು.
ಆದರೆ, ನೀರಜ್ ಛೋಪ್ರಾ ಶಿರಸಿಗೆ ಆಗಮಿಸಿಲ್ಲ. ಕಾಶೀನಾಥ್ ಅವರ ಮನೆಗೆ ತೆರಳಿದ್ದು ನಿಜ. ಆದರೆ, ಅದು ಪೂನಾದಲ್ಲಿರುವ ಕಾಶಿನಾಥ್ ನಿವಾಸದಲ್ಲಿ. ಕಾಶಿನಾಥ ಅವರ ಪೂನಾದಲ್ಲಿರುವ ಅಪಾರ್ಟೆಂಟ್ ಗೆ ತೆರಳಿದ ನೀರಜ್ ಛೋಪ್ರಾ, ಅಲ್ಲಿ ಅಲ್ಲಿ ಮಾತುಕತೆ ನಡೆಸಿದ್ದಾರೆ.
ವಿಸ್ಮಯ ನ್ಯೂಸ್, ಶಿರಸಿ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಆರೋಗ್ಯದಲ್ಲಿ ಆಕಸ್ಮಿಕ ಏರುಪೇರು: ಲಕ್ಷ್ಮೇಶ್ವರದ ರವೀಂದ್ರ ಮುರಾರಿ ನಾಯ್ಕ ವಿಧಿವಶ
- ಅಡಿಕೆ ಧಾರಣೆ: ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ದರದ ವಿವರ ಹೇಗಿದೆ ನೋಡಿ?
- ಬಸ್ ನಿಲ್ದಾಣದಲ್ಲಿ ನಿಲ್ಲಿಸಿಟ್ಟ ಬೈಕ್ ಕಳ್ಳತನ: ನಸುಕಿನ ವೇಳೆ ಕೃತ್ಯ?
- ಕರ್ನಾಟಕ ಜ್ಯೂನಿಯರ್ ಅಥ್ಲೆಟಿಕ್ಸ್ ನಲ್ಲಿ ವಿದ್ಯಾರ್ಥಿಗಳ ಸಾಧನೆ
- ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.