Important
Trending
ಮತ್ತೊಂದು ದುರಂತ: ನೀರಿನ ಸುಳಿಗೆ ಸಿಲುಕಿ ಈಜಲು ತೆರಳಿದ ಮೆಡಿಕಲ್ ವಿದ್ಯಾರ್ಥಿ ಸಾವು: ವಾರದಲ್ಲೇ ಜೀವಕಳೆದುಕೊಂಡರು ಆರು ಮಂದಿ

ಗೋಕರ್ಣ: ಪ್ರವಾಸಿಗರು ಈಜಲು ತೆರಳಿ ಸಾವನ್ನಪ್ಪುತ್ತಿರುವ ಪ್ರಕರಣ ಜಿಲ್ಲೆಯ ಕಡಲತೀರದಲ್ಲಿ ಹೆಚ್ಚುತ್ತಿದೆ. ಕಳೆದ ಒಂದು ವಾರದಲ್ಲೇ ಆರು ಪ್ರವಾಸಿಗರು ಮೃತಪಟ್ಟಿದ್ದಾರೆ.

ಇದೀಗ ಸಮುದ್ರದಲ್ಲಿ ಈಜಲು ಹೋದ ಪ್ರವಾಸಿಗ ಅಲೆಗಳ ರಭಸಕ್ಕೆ ಸಿಕ್ಕಿ ಮೃತಪಟ್ಟ ಘಟನೆ ಗೋಕರ್ಣದ ಕುಡ್ಲೆ ಕಡಲತೀರದಲ್ಲಿ ನಡೆದಿದೆ .
ಗೋಕರ್ಣಕ್ಕೆ ಆರು ಜನ ವಿದ್ಯಾರ್ಥಿಗಳು ಪ್ರವಾಸಕ್ಕೆ ಎಂದು ಬೆಂಗಳೂರಿನಿಂದ ಬಂದಿದ್ದರು. ಈ ವೇಳೆ ಎಲ್ಲಾ ಆರು ಪ್ರವಾಸಿಗರು ಕುಡ್ಲೆ ಕಡಲತೀರದಲ್ಲಿ ಈಜು ತೆರಳಿದ್ದಾರೆ. ಈಜಲು ತೆರಳಿದ ವೇಳೆ ಅಲೆಗೆ ಸಿಕ್ಕಿ ವಿಕ್ರಮ್ ಸಾವು ಕಂಡಿದ್ದಾನೆ.

ವಿಕ್ರಮ್ ಬೀದರ್ ಜಿಲ್ಲೆಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಎಂದು ತಿಳಿದುಬಂದಿದೆ. ಈ ಸಂಬಂಧ ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಸ್ಮಯ ನ್ಯೂಸ್ ಗೋಕರ್ಣ
ಇದನ್ನೂ ಓದಿ: ಪ್ರಮುಖ ಸುದ್ದಿಗಳು
- ಸಾನ್ವಿ ಸ್ಕಿನ್ ಮತ್ತು ಲೇಸರ್ ಸೆಂಟರ್ ನಲ್ಲಿ ಉಚಿತ ಪಿಸಿಯೋಥೆರಪಿ ಶಿಬಿರ
- ಮೇ 21ರ ವರೆಗೆ ರೆಡ್ ಅಲರ್ಟ್ ಘೋಷಣೆ: ಭಾರೀ ಮಳೆಯ ಮುನ್ನೆಚ್ಚರಿಕೆ
- ಮಹಿಳಾ ರಿಸೆಪ್ಯನಿಸ್ಟ್ ಬೇಕಾಗಿದ್ದಾರೆ: ವಸತಿ ಸೌಲಭ್ಯ, ಆಕರ್ಷಕ ಸಂಬಳ
- ನಾಟಿ ವೈದ್ಯ ಬೆಳಂಬಾರದ ಹನುಮಂತಗೌಡರ ಮನೆಯಲ್ಲಿ ಹತ್ತು ಸಾವಿರ ಧನ್ವಂತರಿ ಜಪ, ಹೋಮಹವನ: ಸಮಸ್ತ ಜನರ ಆರೋಗ್ಯ ಸೌಭಾಗ್ಯಕ್ಕೆ ಪ್ರಾರ್ಥನೆ
- ಉಗ್ರರ ದಾಳಿ ಬಳಿಕ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸುತ್ತಿರುವ ವ್ಯಾಪಾರಿಗಳು, ರೈತರು: ವೀಳ್ಯದೆಲೆ ರಪ್ತು ಮಾಡುವುದಿಲ್ಲ ಎಂದ ಬೆಳೆಗಾರರು