Follow Us On

WhatsApp Group
Important
Trending

ರಸ್ತೆ ಅಂಚಿನ ವಿದ್ಯುತ್ ಕಂಬಕ್ಕೆ ಡಿಕ್ಕಿ| ಕ್ಷಣಮಾತ್ರದಲ್ಲೇ ಹೊತ್ತಿ ಉರಿದ ಕಾರ್ !

ಅಂಕೋಲಾ ಅ 25: ರಾ.ಹೆ. 63ರ ಅಂಕೋಲಾ – ಹುಬ್ಬಳ್ಳಿ ಮಾರ್ಗ ಮಧ್ಯೆ ಹೆಬ್ಬುಳ ಬಳಿ ಸಂಭವಿಸಿದ ರಸ್ತೆ ಅಪಘಾತದ ವೇಳೆ,ಟಾಟಾ ಕಂಪೆನಿಯ ಟಿಗೋ ಕಾರ್ ಪೂರ್ತಿ ಸುಟ್ಟುಹೋಗಿದೆ.

ಧಾರವಾಡದಿಂದ ಕುಮಟಾಕ್ಕೆ ತೆರಳುತ್ತಿದ್ದ ಈ ವಾಹನ ಹೆಬ್ಬುಳ ಬಳಿ ಚಾಲಕನ ನಿಯಂತ್ರಣ ತಪ್ಪಿ,ರಸ್ತೆಯಂಚಿನ ವಿದ್ಯುತ್ ಕಂಬದ ಬಳಿ ಹೊರಳಿದ ಪರಿಣಾಮ ಅದಾವುದೋ ಕಾರಣದಿಂದ ಆಕಸ್ಮಿಕ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆ ಕೇಳಿಬಂದಿದೆ. ಅದೃಷ್ಟವಶಾತ್ ಕಾರ್ ಚಾಲಕನಿಗೆ ಯಾವುದೇ ತೊಂದರೆಯಾಗಿಲ್ಲ. ಸುದ್ದಿ ತಿಳಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಪ್ರಯತ್ನ ನಡೆಸಿದ್ದರು.

ಬೆಂಕಿ ಹೊತ್ತಿಕೊಂಡ ದೃಶ್ಯ

ಬುಧವಾರ ಬೆಳಿಗ್ಗೆ ನಡೆದ ಈ ರಸ್ತೆ ಅವಘಡದಿಂದ ರಾಷ್ಟ್ರೀಯ ಹೆದ್ದಾರಿ ಸಂಚಾರದಲ್ಲಿ ಕೆಲಕಾಲ ವೃತ್ಯಯವಾಗಿತ್ತು . ಸ್ಥಳೀಯ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು,ಪೊಲೀಸ್ ಹಾಗೂ ಇತರರು ಹಾಜರಿದ್ದು, ಸಂಚಾರ ಸುರಕ್ಷತೆಗೆ ಒತ್ತು ನೀಡಿದರು.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button