ಉಗ್ರರು ನುಸುಳಿರುವ ಶಂಕೆ: ಕರಾವಳಿ ಜಿಲ್ಲೆಯಲ್ಲಿ ಹೈ ಅಲರ್ಟ್

ಉಗ್ರರು ಕೇರಳ ಮತ್ತು ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ನುಸುಳಿರುವ ಕುರಿತು ಸುಳಿವನ್ನು, ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ.

ಕೇರಳದ ಕರಾವಳಿ ಪ್ರದೇಶಕ್ಕೆ 12 ಶ್ರೀಲಂಕಾ ಮೂಲಕ ಉಗ್ರರು 2 ಯಾಂತ್ರಿಕ ದೋಣಿಗಳಲ್ಲಿ ಬಂದಿದ್ದಾರೆ ಎನ್ನಲಾಗಿದೆ. ಇದರಿಂದಾಗಿ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಎಲ್ಲೆಡೆ ಪೊಲೀಸರು ಹದ್ದಿನ ಕಣ್ಣು ನೆಟ್ಟಿದ್ದಾರೆ.

ಈಗಾಗಲೇ ಕೇರಳದ ಆಲಪ್ಪುಝಕ್ಕೆ ಉಗ್ರರು ಶ್ರೀಲಂಕಾದಿಂದ ತಲಪಿದ್ದು, ಅಲ್ಲಿಂದ ಕರ್ನಾಟಕ ಅಥವ ಕೇರಳದ ಯಾವುದೇ ಕಡೆಗಳಿಂದ ಪಾಕಿಸ್ತಾನಕ್ಕೆ ತೆರಳುವ ಮಾಹಿತಿ ಇದೆ. ಅದಕ್ಕಾಗಿ ಕರಾವಳಿ ಕಾವಲು ಪೊಲೀಸ್, ಭಾರತೀಯ ರಕ್ಷಣಾ ಪಡೆಗಳಿಗೆ ಎಚ್ಚರಿಕೆ ವಹಿಸುವಂತೆ
ಸೂಚನೆ ನೀಡಲಾಗಿದೆ.

ಅನುಮಾನಾಸ್ಪದ ವ್ಯಕ್ತಿಗಳು, ಅನುಮಾನಾಸ್ಪದ ಬೋಟ್ ಕಂಡುಬಂದರೆ ಪೊಲೀಸರಿಗೆ ತಿಳಿಸುವಂತೆ ಸ್ಥಳೀಯ ಮೀನುಗಾರರಿಗೆ ಸೂಚನೆಯನ್ನೂ ನೀಡಲಾಗಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Exit mobile version