ವಿಜಯ್ ಅಭಿಯಾನದ ಅಂಗವಾಗಿ ಭಾರತೀಯ ನೌಕಾಪಡೆಯ ಬೈಕ್ ರ‍್ಯಾಲಿ : ಕದಂಬ ನೌಕಾನೆಲೆಯಲ್ಲಿರುವ ಐಎನ್‌ಎಸ್ ವಿಕ್ರಮಾದಿತ್ಯದ ಮೇಲೆ ವಿಶೇಷವಾಗಿ ಚಾಲನೆ

ಕಾರವಾರ: ಆಜಾದಿ ಕಾ ಅಮೃತ ಮಹೋತ್ಸವ ಹಾಗೂ ಪಾಕ್ ವಿರುದ್ಧ ಯುದ್ಧದಲ್ಲಿ ಗೆಲುವು ಸಾಧಿಸಿ 50 ವರ್ಷ ಸಂದ ಹಿನ್ನೆಲೆಯಲ್ಲಿ ಸರ್ಣಿಮ್ ವಿಜಯ್ ಅಭಿಯಾನದ ಅಂಗವಾಗಿ ಭಾರತೀಯ ನೌಕಾಪಡೆಯು ಬೈಕ್ ರ‍್ಯಾಲಿ ಆಯೋಜಿಸಿದೆ. ಈ ರ‍್ಯಾಲಿಗೆ ಕಾರವಾರದಿಂದ ಚಾಲನೆ ನೀಡಲಾಗಿದೆ. ಈ ಬೈಕ್ ರ‍್ಯಾಲಿಗೆ ಕಾರವಾರದ ಐಎನ್‌ಎಸ್ ಕದಂಬ ನೌಕಾನೆಲೆಯಲ್ಲಿರುವ ಭಾರತೀಯ ನೌಕಾಸೇನೆಯ ಯುದ್ಧ ವಿಮಾನ ವಾಹಕ ನೌಕೆ ಐಎನ್‌ಎಸ್ ವಿಕ್ರಮಾದಿತ್ಯದ ಮೇಲೆ ವಿಶೇಷವಾಗಿ ಚಾಲನೆ ನೀಡಲಾಗಿದೆ.

ಕಾರವಾರದಿಂದ ಹೊರಟ ರ‍್ಯಾಲಿ ಅಕ್ಟೋಬರ್ 21ಕ್ಕೆ ನವದೆಹಲಿ ತಲುಪುವ ಸಾಧ್ಯತೆ ಇದೆ. ವಿವಿಧ ಹಂತಗಳಲ್ಲಿ 50ಕ್ಕೂ ಹೆಚ್ಚು ನೌಕಾ ಸಿಬ್ಬಂದಿ, 11 ದ್ವಿಚಕ್ರ ವಾಹನಗಳು ಮತ್ತು ಎರಡು ಬೆಂಬಲ ವಾಹನಗಳ ಮೂಲಕ 6000 ಕಿ.ಮೀ. ದೂರವನ್ನು ಕಾರವಾರದಿಂದ ದೆಹಲಿಗೆ ತಲುಪಲಿದೆ.

ವಿಸ್ಮಯ ನ್ಯೂಸ್, ಕಾರವಾರ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Exit mobile version