ಕಾಲುಸಂಕದಿಂದ ಹಳ್ಳಕ್ಕೆ ಬಿದ್ದು ಸೊಂಟ,‌ಕಾಲು ಮುರಿತ :ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಹೊತ್ತುಕೊಂಡು ಆಸ್ಪತ್ರೆಗೆ ಸೇರಿಸಿದ‌ ಸ್ಥಳೀಯರು

ಜೊಯಿಡಾ: ಹಳ್ಳಕ್ಕೆ ಹಾಕಲಾದ ಕಾಲುಸಂಕದಿಂದ ಯುವಕನೊಬ್ಬ ಕಾಲು ಜಾರಿ ಹಳ್ಳಕ್ಕೆ ಬಿದ್ದು, ಗಾಯಗೊಂಡ ಘಟನೆ ತಾಲೂಕಿನಲ್ಲಿ ನಡದಿದೆ. ಗಣೇಶ ಚತುರ್ಥೀ ಹಬ್ಬಕ್ಕೆ ತನ್ನ ಊರಿಗೆ ಗೊವಾದಿಂದ ಬರುತ್ತಿರುವ ವೇಳೆ ಕಾಲು ಸಂಕ ದಾಟುತ್ತಿರುವ ವೇಳೆ ಕಾಲು ಜಾರಿ ಹಳ್ಳಕ್ಕೆ ಬಿದ್ದು,ಸೊಂಟ, ಕಾಲು ಮುರಿದಿದೆ ಎಂದು ತಿಳಿದು ಬಂದಿದೆ.

ನಂತರ ಸ್ಥಳೀಯರು ತುಂಬಿ ಹರಿಯುತ್ತಿದ್ದ ಕರಂಜೆ ಹಳ್ಳದಲ್ಲಿ ಹೊತ್ತುಕೊಂಡು ಹಳ್ಳ ದಾಟಿಸಿ ಗೋವಾ ಆಸ್ಪತ್ರೆಗೆ ಕರೆದಿಕೊಂಡು ಹೋಗಿದ್ದಾರೆ. ಗಾಯಗೊಂಡ ವ್ಯಕ್ತಿ ರಾಘವೇಂದ್ರ ಕಾಲೇಕರ (25 )ವರ್ಷ , ಡಿಗ್ಗಿಯ ನಿವಾಸಿಯಾಗಿದ್ದು ಈತ ಗೋವಾದಲ್ಲಿ ಕೆಲಸ ಮಾಡುತ್ತಿದ್ದ.

ವಿಸ್ಮಯ ನ್ಯೂಸ್ ಜೋಯ್ಡಾ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Exit mobile version