Follow Us On

WhatsApp Group
Important
Trending

ಡಿವೈಡರ್‌ಗೆ ಡಿಕ್ಕಿ ಹೊಡೆದ ಪ್ರವಾಸಿಗರ ಕಾರು: ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟ ಕಾರು ಚಾಲಕ

ಮುರುಡೇಶ್ವರ: ಪ್ರವಾಸಿಗರ ಕಾರೊಂದು ಮುರುಡೇಶ್ವರ ಹೋಟೆಲ್ ಒಂದರ ಎದುರಿನ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಮೃತಪಟ್ಟ ಘಟನೆ ರಾತ್ರಿ ನಡೆದಿದೆ. ಸೆಪ್ಟೆಂಬರ್ 7ರಂದು ಯಾದಗಿರಿಯಿಂದ ಪ್ರವಾಸಕ್ಕೆ ಹೊರಟ ತಂಡ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಮಡಿಕೇರಿ,ಉಡುಪಿ ಕಡೆಗಳಲ್ಲಿ ಪ್ರವಾಸ ಮುಗಿಸಿ ರಾತ್ರಿ ಮುರುಡೇಶ್ವರಕ್ಕೆ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಭಟ್ಕಳ ದಾಟಿ ಬಸ್ತಿ ಮಾರ್ಗವಾಗಿ ಒಲಗ ಮಂಟಪ ದಾಟಿ ಮುರುಡೇಶ್ವರ ದೇವಸ್ತಾನದ ಕಡೆ ಹೋಗುತ್ತಿರುವಾಗ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಚಾಲಕ ಮಹೇಶ ಈತನು ಚಾಲಾಯಿಸುತ್ತಿದ್ದ ಕಾರನ್ನು ಅತಿ ವೇಗ ಹಾಗೂ ಅಜಾಗರುಕತೆಯಿಂದ ಚಾಲಾಯಿಸಿಕೊಂಡು ಬಂದು ಮುರುಡೇಶ್ವರ ಇಂದ್ರಪ್ರಸ್ತ ಹೋಟೆಲ್ ಇದುರಿನ ಸಿಮೆಂಟ್ ರಸ್ತೆಯ ಮಧ್ಯದಲ್ಲಿರುವ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದವರು ಸಣ್ಣ ಪುಟ್ಟ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಆದರೆ, ಕಾರಿನ ಚಾಲಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಮುರುಡೇಶ್ವರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button