Follow Us On

WhatsApp Group
Important
Trending

ಜಿಂಕೆ ಕೊಂದು ಮಾಂಸ ಮಾರಾಟಕ್ಕೆ ಯತ್ನಿಸಿದ ಇಬ್ಬರು ಅರೆಸ್ಟ್: ಜಿಂಕೆಯ ತಲೆ, ಒಂದು ಬಂದೂಕು ವಶಕ್ಕೆ

ಯಲ್ಲಾಪುರ: ಜಿಂಕೆಯನ್ನು ಕೊಂದು ಮಾಂಸವನ್ನು ತರುತ್ತಿದ್ದಾಗ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಕಾರ್ಯಾಚರಣೆ ವೇಳೆ ಇನ್ನಿಬ್ಬರು ಆರೋಪಿಗಳು ಪರಾರಿಯಾದ ಘಟನೆ ತಾಲೂಕಿನಸನವಳ್ಳಿ ಅರಣ್ಯದಲ್ಲಿ ನಡೆದಿದೆ.

ಈ ನಾಲ್ವರು ಆರೋಪಿಗಳು ಸನವಳ್ಳಿ ಅರಣ್ಯದಲ್ಲಿ ಬೇಟೆಯಾಡಲು ಹೋಗಿದ್ದರು. ಜಿಂಕೆಯನ್ನು ಬೇಟೆಯಾಡಿ ಅರಣ್ಯದಲ್ಲಿಯೆ ಜಿಂಕೆಯ ತಲೆ ಹಾಗೂ ಚರ್ಮವನ್ನು ಬೇರೆ-ಬೇರೆ ಮಾಡಿ ಕಾಡಿನಿಂದ ಜಿಂಕೆ ಮಾಂಸವನ್ನು ತರುತ್ತಿದ್ದರು.

ಖಚಿತ ಮಾಹಿತಿ ಮೇರೆಗೆ ಇಲ್ಲಿನ ಅರಣ್ಯ ಇಲಾಖೆ ಸಿಬ್ಬಂದಿ ದಾಳಿ ನಡೆಸಿ 20 ಕೆ.ಜಿ. ಮಾಂಸ, ಜಿಂಕೆಯ ತಲೆ, ಒಂದು ಬಂದೂಕು ವಶಕ್ಕೆ ಪಡೆದಿದ್ದಾರೆ. ಉಳಿದ ಇಬ್ಬರು ಆರೋಪಿಗಳ ಶೋಧ ಕಾರ್ಯ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ. ಸನವಳ್ಳಿ ಗ್ರಾಮದ ಕಾನು ಶಳಕೆ, ಸುರೇಶ ಹನಮಣ್ಣವರ ಬಂಧಿತ ಆರೋಪಿಗಳು. ಫಕೀರೇಶ ಕೆರಿಹೊಲದವರ ಹಾಗೂ ಇನ್ನೊಬ್ಬ ಆರೋಪಿ ನಾಪತ್ತೆಯಾಗಿದ್ದಾರೆ.

ವಿಸ್ಮಯ ನ್ಯೂಸ್, ಯಲ್ಲಾಪುರ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button