Follow Us On

WhatsApp Group
Important
Trending

ಪ್ರೀತಿಯ ಅಮಲಿನಲ್ಲಿ ಮೈಮರೆತು ಯುವಕನಿಗೆ ಚೂರಿ ಇರಿತ : ಯುವಕ ಗಂಭೀರ: ಪರಾರಿಯಾದ ಆರೋಪಿಗಾಗಿ ಹುಡುಕಾಟ

ಸಿದ್ದಾಪುರ: ಪ್ರೀತಿ-ಪ್ರೇಮ-ಪ್ರಣಯದ ಮೋಹದ ಬಲೆಗೆ ಬಿದ್ದ ಯುವಕರು ಮೈಮರೆತಂತೆ ವರ್ತಿಸುತ್ತಿರುವ ಘಟನೆ ಇತ್ತಿಚೆಗೆ ಹೆಚ್ಚುತ್ತಿದೆ. ಪ್ರೀತಿಯ ಅಮಲಿನಲ್ಲಿ ಮೈಮರೆತ ಯುವಕನೊಬ್ಬ, ಇನ್ನೊಬ್ಬ ಯುವಕನಿಗೆ ಚೂರಿ ಇರಿದ ಘಟನೆ ಇದೀಗ ಉತ್ತರಕನ್ನಡದಲ್ಲಿ ನಡೆದಿದೆ.

ಚೂರಿ ಇರಿತಕ್ಕೊಳಗಾದ ಯುವಕನ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನೆ ಮಾಡಲಾಗಿದೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದ್ದು, ಕೊನೆಗೆ ಈ ಗಲಾಟೆ ಚಾಕು ಇರಿತದಲ್ಲಿ ಕೊನೆಗೊಂಡಿದೆ. ಆರೋಪಿ ಪರಾರಿಯಾಗಿದ್ದು ಪೊಲೀಸರು ತೀವ್ರ ಹುಡುಕಾಟ ಆರಂಭಿಸಿದ್ದಾರೆ.

ಪವನ ನಾಯ್ಕ (20) ಎನ್ನುವ ಯುವಕ ಚೂರಿ ಇರಿತಕ್ಕೊಳಗಾದ ಯುವಕ. ಸುಮಂತ ಗೌಡ, ಚೂರಿ ಇರಿದು ಪರಾರಿಯಾದ ಯುವಕನಾಗಿದ್ದಾನೆ. ಈ ಘಟನೆ ನಡೆದಿರೋದು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಅವರಗುಪ್ಪದಲ್ಲಿ.. ಸಂಬoಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಸಿದ್ದಾಪುರ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button