Follow Us On

WhatsApp Group
Important
Trending

ಅಣ್ಣನಿಗೆ ತಂಗಿ ನಂಬರ್ ನೀಡಬೇಕೆಂದು ಪೀಡಿಸಿ ಚಾಕು ಇರಿದ: ತಲೆ ಬೋಳಿಸಿಕೊಂಡು ತಪ್ಪಿಸಿಕೊಳ್ಳಲು ಯತ್ನ : 24 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು

ಸಿದ್ದಾಪುರ: ಅಣ್ಣನಿಗೆ ತಂಗಿ ನಂಬರ್ ನೀಡಬೇಕೆಂದು ಪೀಡಿಸಿ, ಆತ ನೀಡದೆ ಇರುವಾಗ ಆತನ ಹೊಟ್ಟೆಯ ಭಾಗಕ್ಕೆ ಚೂರಿ ಇರಿದು ಆರೋಪಿ ನಾಪತ್ತೆಯಾಗಿದ್ದ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿಯನ್ನು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಪೊಲೀಸರಿಂದ ತಪ್ಪಿಸಿಕೊಳ್ಳಲು ಆರೋಪಿ ತಲೆ ಬೋಳಿಸಿಕೊಂಡು ತಿರುಗಾಡುತ್ತಿದ್ದ ಎನ್ನಲಾಗಿದೆ. ಆದರೆ, ಇನ್ನೊರ್ವ ಆರೋಪಿ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಹೌದು, ತಾಲೂಕಿನ ಅವರಗುಪ್ತ ಐಟಿಐ ಕಾಲೇಜ್ ಬಳಿ ಸೋಮವಾರ ಇಬ್ಬರು ಯುವಕರ ನಡುವೆ ಚಾಕು ಇರಿತ ಘಟನೆ ನಡೆದಿತ್ತು.

24 ಗಂಟೆಯೊಳಗೆ ಆರೋಪಿ ಸುಮನ್ ಗೌಡರ್‌ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿ ಸುಮನ್ ಗೌಡರ ಮತ್ತು ಪವನ ನಾಯ್ಕ ನಡುವೆ ಸೋಮವಾರ ಚೂರಿ ಇರಿತ ಘಟನೆ ನಡೆದಿದ್ದು, ಆರೋಪಿಯು ಪವನನ ತಂಗಿ ನಂಬರ್ ನೀಡಬೇಕೆಂದು ಪೀಡಿಸುತ್ತಿದ್ದ.

ಆತ ನೀಡದಿದ್ದಕ್ಕಾಗಿ ಪವನ್‌ನ ಹೊಟ್ಟೆಯ ಭಾಗಕ್ಕೆ ಚೂರಿಯಿಂದ ಇರಿದು ತಕ್ಷಣ ಆರೋಪಿ ನಾಪತ್ತೆಯಾಗಿದ್ದ. ಗಾಯಗೊಂಡ ಪವನನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ಕಳಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎನ್ನಲಾಗಿದೆ. ಈ ಇಬ್ಬರ ನಡುವೆ ಈ ಮೊದಲು ಕೂಡಾ ಜಗಳ ನಡೆದಿತ್ತು ಎನ್ನಲಾಗಿದೆ.

ವಿಸ್ಮಯ ನ್ಯೂಸ್, ಸಿದ್ದಾಪುರ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button