Follow Us On

WhatsApp Group
Important
Trending

ಕಂಪ್ಯೂಟರ್ ಪರೀಕ್ಷೆಗೆ ಹಾಜರಾಗಲು ತೆರಳುತ್ತಿದ್ದ ವೇಳೆ ಬೈಕ್ ಅಪಘಾತ: ಪಿಡಿಓ ಸಾವು: ಹಿಟ್ ಆಂಡ್ ರನ್ ಕೇಸ್?

ಕುಮಟಾ: ಕಂಪ್ಯೂಟರ್ ಪರೀಕ್ಷೆಗೆ ಹಾಜರಾಗಲು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ, ಅಪಘಾತ ನಡೆದು ಪಂಚಾಯತ್ ಪಿಡಿಓ ಒಬ್ಬರು ಸಾವನ್ನಪ್ಪಿದ್ದ ಧಾರುಣ ಘಟನೆ ನಡೆದಿದೆ. ಪರೀಕ್ಷೆಗೆ ಹಾಜರಾಗಲು ಹೋಗುತ್ತಿರುವಾಗ ತಲೆಸುತ್ತು ಬಂದ ಕಾರಣವೋ ಅಥವಾ ಇನ್ನಾವುದೋ ಕಾರಣಕ್ಕೆ ಬೈಕ್ ಮೇಲಿನ ನಿಯಂತ್ರಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.

ನಿಯಂತ್ರಣ ತಪ್ಪಿದ ಪರಿಣಾಮ ಬೈಕ್ ಡಿವೈಡರ್ ಗೆ ಗುದ್ದಿದ್ದು , ತಲೆಗೆ ಗಂಭೀರವಾಗಿ ಗಾಯಗೊಂಡಿತ್ತು. ಈ ವೇಳೆ ಅಲ್ಲಿ ನೆರೆದಿದ್ದ ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದರಾದರೂ ಚಿಕಿತ್ಸೆ ಫಲಿಸಲಿಲ್ಲ.

ಹೌದು, ಇಡಗುಂಜಿ ಹಾಗೂ ಸಾಲ್ಕೋಡ ಪಂಚಾಯತ ಜವಾಬ್ದಾರಿ ನಿರ್ವಹಿಸುತ್ತಿದ್ದ ಪಿ.ಡಿ.ಓ ಪ್ರಶಾಂತ ಶೆಟ್ಟಿ ಮೃತ ದುರ್ದೈವಿ. ಹೊನ್ನಾವರದಿಂದ ಕಾರವಾರಕ್ಕೆ ಬೈಕ್ ನಲ್ಲಿ ತೆರಳುವಾಗ ಕುಮಟಾ ತಾಲೂಕಿನ ದಂಡಕುಳಿ ಬಳಿ ಅಪಘಾತ ಸಂಭವಿಸಿದೆ. ಯಾವುದೋ ವಾಹನ ಬಡಿದು, ನಿಯಂತ್ರಣ ತಪ್ಪಿ ಡಿವೈಡರ್ ಗೆ ಗುದ್ದಿರಬಹುದು ಎನ್ನುವ ಮಾತುಗಳು ಕೇಳಿಬರುತ್ತಿವೆ.

ವಿಸ್ಮಯ ನ್ಯೂಸ್, ಕುಮಟಾ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button