Follow Us On

WhatsApp Group
Important
Trending

ಗ್ರಾಹಕನ ಸೋಗಿನಲ್ಲಿ ಬಂದು ಅಂಗಡಿಯವನಿಂದ ಚಿನ್ನದ ಸರ ಕಸಿದುಕೊಂಡು ಪರಾರಿ: ಸಿಸಿಟಿವಿಯಲ್ಲಿ ಸೆರೆಯಾಗಿದೆ ಕಳ್ಳನ ಕೈಚಳಕ

ಶಿರಸಿ: ಚಿನ್ನಕ್ಕೆ ಕನ್ನ ಹಾಕೋದಿಕ್ಕೆ ಕಳ್ಳರು ಏನೆಲ್ಲಾ ಪ್ಲಾನ್ ಮಾಡ್ತಾರೆ ನೋಡಿ. ಯಾರು ಇಲ್ಲದ ವೇಳೆ ಅಂಗಡಿಗೆ ಕನ್ನ ಹಾಕಿ ಚಿನ್ನ ಕದ್ದಿರುವ ಬಗ್ಗೆ ಆಗಾಗ ಸುದ್ದಿ ಕೇಳುತ್ತಿರುತ್ತೇವೆ. ಆದರೆ, ಈತ ಚಿನ್ನವನ್ನು ರಾಜಾರೋಷವಾಗಿ, ಹಾಡುಗಲೇ ಕದ್ದಿದ್ದಾನೆ.

ಸ್ವಿಫ್ಟ್ ಕಾರಿನಲ್ಲಿ ಬಂದಿದ್ದ ಕಳ್ಳರು ಅಂಗಡಿಯಿಂದ ಸ್ವಲ್ಪ ದೂರದಲ್ಲಿ ಕಾರನ್ನು ನಿಲ್ಲಿಸಿ, ನಂತರ ಪರಾರಿಯಾಗಿದ್ದಾರೆ ಎನ್ನಲಾಗಿದ್ದು, ಆರೋಪಿಗಳ ಬಂಧನಕ್ಕೆ ಪೋಲೀಸರು ಬಲೆ ಬೀಸಿದ್ದಾರೆ.

ಹೌದು, ಗ್ರಾಹಕರ ಸೋಗಿನಲ್ಲಿ ಬಂದ ಕಳ್ಳರು ಅಂಗಡಿಯವನಿಂದ ಚಿನ್ನದ ಸರವನ್ನ ಕಸಿದುಕೊಂಡು ಪರಾರಿಯಾಗಿದ್ದಾರೆ. ಈ ಘಟನೆ ನಗರದ ಸಿಪಿ ಬಜಾರ್ ರಸ್ತೆಯಲ್ಲಿ ನಡೆದಿದೆ. ನಗರದ ಸಿಪಿ ಬಜಾರ್ ರಸ್ತೆಯಲ್ಲಿರುವ ರತ್ನದೀಪ್ ಜ್ಯುವೆಲರಿ ಅಂಗಡಿಗೆ ಗ್ರಾಹಕರ ಸೋಗಿನಲ್ಲಿ ಕಳ್ಳನೊಬ್ಬ ಆಗಮಿಸಿದ್ದಾನೆ.

ಮೊದಲು ಅಂಗಡಿಗೆ ಬಂದು ಕಳ್ಳ ಚಿನ್ನದ ಸರ ಖರೀದಿ ಮಾಡುವಂತೆ ನಟಿಸಿದ್ದಾನೆ. ಬಳಿಕ ಏಕಾಏಕಿ ಸರವನ್ನು ಮಾಲೀಕನ ಕೈಯಿಂದ ಕಸಿದು ಕದ್ದು ಪರಾರಿಯಾಗಿದ್ದಾನೆ.

ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಶಿರಸಿ ಡಿವೈಎಸ್.ಪಿ ರವಿ ನಾಯ್ಕ, ಸಿಪಿಐ ರಾಮಚಂದ್ರ ನಾಯಕ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ವಿಸ್ಮಯ ನ್ಯೂಸ್, ಶಿರಸಿ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button