ಬಂಡೆಯ ಮದ್ಯಭಾಗದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪುರುಷನ ಶವ ಪತ್ತೆ: ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ: ಕಾಡುತ್ತಿದೆ ಹಲವು ಅನುಮಾನ

ಭಟ್ಕಳ: ಇಲ್ಲಿನ ಪ್ರಸಿದ್ಧ ಪ್ರವಾಸಿ ತಾಣವಾದ ಹುಯಿಲ್ಮಡಿ ಬೀಚ್ ಹತ್ತಿರ ಎರಡು ಮೃತ ದೇಹ ಪತ್ತೆಯಾಗಿದ್ದು, ಸ್ಥಳೀಯ ನಿವಾಸಿಗಳ ನಿದ್ದೆಗೆಡಿಸಿದೆ. ಹೌದು, ಕಡಲ ತೀರದ ಬಂಡೆಗಳ ಕೆಳಗೆ ಮಹಿಳೆ ಮತ್ತು ಪುರುಷನ ಶವ ಪತ್ತೆಯಾಗಿದೆ. ಅಲ್ಲದೆ, ಆಧಾರ ಕಾರ್ಡ್, ಪಾನ್ ಕಾರ್ಡ್, ಡ್ರೆöವಿಂಗ್ ಲೈಸನ್ಸ್ ಸಂಪೂರ್ಣ ಹರಿದು ಹಾಕಿದ ಸ್ಥಿತಿಯಲ್ಲಿ ಸಿಕ್ಕಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ.

ಮೃತಪಟ್ಟವರು ಬೆಂಗಳೂರು ಉತ್ತರದ ಮುತ್ಯಾಲ ನಗರ ಜೆಪಿ ಪಾರ್ಕ್ ಹತ್ತಿರದ ನಿವಾಸಿಗಳಾದ ಆದಿತ್ಯ ಬಿ,ಎನ್ ಹಾಗೂ ಲಕ್ಷ್ಮೀ ಬಿ. ಈ ಇಬ್ಬರು ತಾಯಿ ಮಗ ಎಂದು ಗುರುತಿಸಲಾಗಿದೆ. ಮಹಿಳೆ ಶವ ಬಂಡೆ ಮೇಲೆ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪುರುಷನ ಶವ ಬಂಡೆಯ ಮದ್ಯಭಾಗದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ತೆರಳಿದ ಪೋಲಿಸರು ಆಧಾರ ಕಾರ್ಡ್ ಆಧರಿಸಿ ಮೃತಪಟ್ಟ ಅವರ ಸಂಬAಧಿಕರನ್ನು ಸಂಪರ್ಕಿಸಿದಾಗ ಈ ಇಬ್ಬರು ತಾಯಿ ಮಗ ಎಂದು ತಿಳಿದು ಬಂದಿದೆ.

ಮಹಿಳೆಯನ್ನು ಕೊಲೆಯ ಮಾಡಿ ಪುರುಷ ಆತ್ಮಹತ್ಯೆ ಮಾಡಿರಬಹುದು ಎಂದು ಪೋಲಿಸರು ಶಂಕೆ ವ್ಯಕ್ತಪಡಿಸಿದ್ದಾರೆ. ಇವರು ಬೆಂಗಳೂರಿನಿoದ ಸೆ.14 ರಂದು ಮುರ್ಡೇಶ್ವರಕ್ಕೆ ಆಗಮಿಸಿದ್ದರು. ಇಲ್ಲಿನ ಲಾಡ್ಜ್ ಒಂದರಲ್ಲಿ ತಂಗಿದ್ದು, ಸೆಪ್ಟೆಂಬರ್ 15 ರಂದು ಲಾಡ್ಜಿನಿಂದ ತೆರವು ಮಾಡಿ ಹೋಗಿದ್ದಾರೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಡಿ.ವೈ.ಎಸ್.ಪಿ ಬೆಳ್ಳಿಯಪ್ಪ,ಸಿ.ಪಿ.ಐ ದಿವಾಖರ.ಗ್ರಾಮೀಣ ಠಾಣೆ ತನಿಕಾಧಿಕಾರಿ ರೇವತಿ ಕುರಿ ಹಾಗೂ ಸಿಬ್ಬಂದಿಗಳು ಇದ್ದರು. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಬಗ್ಗೆ ಹಲವು ಅನುಮಾನ ಕಾಡುತ್ತಿದ್ದು, ತನಿಖೆಯಿಂದ ಸತ್ಯಾಂಶ ಹೊರಬರಬೇಕಿದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ನಿಮ್ಮೂರಲ್ಲೂ ಸೂಪರ್ ಸ್ಟೋರ್ ಮಾಡಬೇಕೆ?

ಸ್ಟೋರ್ ಕಿಂಗ್, ಸ್ಮಾರ್ಟ್ ಸೂಪರ್ ಸ್ಟೋರ್: ನಿಮಗೆ ನೀವೆ ಮಾಲೀಕರಾಗಿ ಜಿಲ್ಲೆ, ತಾಲೂಕು, ಹೋಬಳಿ ಮಟ್ಟದಲ್ಲಿ ತಂತ್ರಜ್ಞಾನ ಚಾಲಿತ ಸೂಪರ್ ಮಾರ್ಕೆಟ್ ನಿರ್ಮಿಸಿ ಹಾಗು ತಿಂಗಳಿಗೆ 1 ಲಕ್ಷ ಅಥವಾ ಅದಕ್ಕಿಂತ ಹೆಚ್ಚು ಸಂಪಾದಿಸಿರಿ. ಸಣ್ಣ ಮಟ್ಟದ ಬಂಡಾವಳ ಹೂಡಿಕೆ ಮಾಡಿ, ನಮ್ಮೊಂದಿಗೆ ಪಾಲುದಾರರಾಗಿ..
ತಿಂಗಳಿಗೆ 1 ಲಕ್ಷ ಅಥವಾ ಅದಕ್ಕಿಂತ ಹೆಚ್ಚು ಸಂಪಾದಿಸಿರಿ : 7338463571

Exit mobile version