ಕರಾವಳಿಯಲ್ಲಿ ಉಗ್ರ ಕೃತ್ಯಕ್ಕೆ ಸಂಚು? ಸಂಶಯಾಸ್ಪದ ಸ್ಯಾಟ್‌ಲೈಟ್ ಫೋನ್ ಆಕ್ಟಿವ್: ಗುಪ್ತಚರ ಮಾಹಿತಿಯಲ್ಲಿ ಏನಿದೆ ನೋಡಿ?

ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಸ್ಲೀಪರ್ ಸೆಲ್ ಗಳು ಮತ್ತೆ ಆಕ್ಟೀವ್ ಆಗಿದ್ದು, ಭಯೋತ್ಪಾದಕ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದ್ದು, ಹೈ ಅಲರ್ಟ್ ಘೋಷಿಸಿದೆ. ಸಂಶಯಾಸ್ಪದ ಸ್ಯಾಟಲೈಟ್ ಫೋನ್ ಕರೆಗಳು ಉತ್ತರಕನ್ನಡದ ಕೆಲ ಭಾಗ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಸಂಪರ್ಕಗೊOಡಿದೆ ಎನ್ನಲಾಗಿದೆ. ಬಂದರು, ಎಲ್ಲಾ ಮೀನುಗಾರಿಕಾ ಜಟ್ಟಿಯಲ್ಲೂ ಕಟ್ಟೆಚ್ಚರ ವಹಿಸಲಾಗಿದೆ.

ಪ್ರಮುಖವಾಗಿ ಕರಾವಳಿ ಜಿಲ್ಲೆಗಳಲ್ಲಿ ಸ್ಲೀಪರ್ ಸೆಲ್ ಗಳು ಮತ್ತೆ ಆಕ್ಟೀವ್ ಆಗಿರುವ ಶಂಕೆಯ ಹಿನ್ನೆಲೆಯಲ್ಲಿ ಜಿಲ್ಲೆಗಳ ಪ್ರಮುಖ ತಾಣಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಗುಪ್ತಚರ ಇಲಾಖೆ ಸೂಚಿಸಿದೆ. ಮುಂಬರುವ ಹಬ್ಬಗಳ ಸಂದರ್ಭದಲ್ಲಿ ಉಗ್ರರು ವಿಧ್ವಂಸಕ ಕೃತ್ಯ ನಡೆಸುವ ಬಗ್ಗೆ ಎಚ್ಚರ ವಹಿಸುವಂತೆ ಮತ್ತು ನಿಗಾ ಇರಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ಬಂದಿದೆ.

ಬೇಹುಗಾರಿಕಾ ಅಧಿಕಾರಿಗಳು ಕರಾವಳಿಯ ಮೂರು ಜಿಲ್ಲೆಯಲ್ಲಿನ ಸ್ಯಾಟಲೈಟ್ ಫೋನ್ ಗಳ ಮೇಲೆ ನಿಗಾ ಇಟ್ಟಿದ್ದು, ನಿಗೂಢ ವ್ಯಕ್ತಿಗಳು ಕರಾವಳಿ, ಮಲೆನಾಡು ಭಾಗದ ದಟ್ಟಾರಣ್ಯಗಳಲ್ಲಿ ಸ್ಯಾಟಲೈಟ್ ಫೋನ್ ಮೂಲಕ ಸಂಪರ್ಕ ಸಾಧಿಸುತ್ತಿರುವ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Exit mobile version