Important
Trending

ಗದ್ದೆ ಕೆಲಸ ಮುಗಿಸಿ ಕಾಲು ತೊಳೆಯಲು ನೀರಿಗೆ ಇಳಿದಾಗ ಕಾಲುಜಾರಿ ನದಿಗೆ ಬಿದ್ದು ವ್ಯಕ್ತಿ ಸಾವು? ನದಿಯಲ್ಲಿ ಶವ ಪತ್ತೆ

ಭಟ್ಕಳ: ತಾಲೂಕಿನ ವೆಂಕಟಾಪುರ ನದಿಯ ದಡದಲ್ಲಿ ವ್ಯಕ್ತಿರ್ಯೊನ ಶವವನ್ನು ಪತ್ತೆಯಾದ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ವೆಂಕಟಪುರದ ವೆಂಕಟರಮಣ ನಾಗಪ್ಪ ಗೊಂಡ ಎಂದು ಗುರುತಿಸಲಾಗಿದೆ. ಇವರು ಗದ್ದೆ ಕೆಲಸಕ್ಕೆ ಹೋಗಿ ಸಂಜೆಯಾಗುತ್ತಿದ್ದoತೆ ಕೆಲಸ ಬಿಟ್ಟು ಮನೆಗೆ ಬರುತ್ತಿದ್ದರು. ಆದರೆ ಗದ್ದೆ ಕೆಲಸ ಮುಗಿಸಿ ಕತ್ತಲೆ ಆದರೂ ಮನೆಗೆ ಬರದಿದ್ದ ನೋಡಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. ಎಷ್ಟೇ ಹುಡುಕಾಡಿದರೂ ವ್ಯಕ್ತಿ ಪತ್ತೆಯಾಗಿರಲಿಲ್ಲ.

ರವಿವಾರ ಸಂಜೆ ವೆಂಕಟಾಪುರ ನದಿಯ ದಡದಲ್ಲಿ ಮೃತ ವ್ಯಕ್ತಿ ಧರಿಸಿದ ಬಟ್ಟೆ ದೊರಕಿದ್ದು ಅನುಮಾನ ಗೊಂಡ ಸ್ಥಳೀಯರು ನದಿಯಲ್ಲಿ ಹುಡುಕಾಟ ನಡೆಸಿದಾಗ ಮೃತ ದೇಹವನ್ನು ಪತ್ತೆಯಾಗಿದೆ. ಈತ ಗದ್ದೆ ಕೆಲಸ ಮುಗಿಸಿ ಕಾಲು ತೊಳೆಯಲು ನೀರಿಗೆ ಇಳಿದಾಗ ಆಕಸ್ಮಿಕ ಕಾಲು ಜಾರಿನದಿಗೆ ಬಿದ್ದಿರಬಹುದೆಂದು ಶಂಕಿಸಲಾಗಿದೆ.

ಸ್ಥಳಕ್ಕೆ ಗ್ರಾಮೀಣ ಠಾಣೆಯ ತನಿಖಾಧಿಕಾರಿ ರತ್ನ ಕುರಿ ಹಾಗೂ ಎ.ಎಸ್.ಐ ಕೃಷ್ಣಾನಂದ ನಾಯ್ಕ ತೆರಳಿ ಪರಿಶೀಲಿಸಿ ಶವವನ್ನು ಸ್ಥಳೀಯ ಯುವಕರ ಸಹಾಯದಿಂದ ಮೇಲಕ್ಕೆ ಎತ್ತಿದ್ದು ನಂತರ ಶವ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಗ್ರಾಮೀಣ ಠಾಣೆ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ನಿಮ್ಮೂರಲ್ಲೂ ಸೂಪರ್ ಸ್ಟೋರ್ ಮಾಡಬೇಕೆ?

ಸ್ಟೋರ್ ಕಿಂಗ್, ಸ್ಮಾರ್ಟ್ ಸೂಪರ್ ಸ್ಟೋರ್: ನಿಮಗೆ ನೀವೆ ಮಾಲೀಕರಾಗಿ ಜಿಲ್ಲೆ, ತಾಲೂಕು, ಹೋಬಳಿ ಮಟ್ಟದಲ್ಲಿ ತಂತ್ರಜ್ಞಾನ ಚಾಲಿತ ಸೂಪರ್ ಮಾರ್ಕೆಟ್ ನಿರ್ಮಿಸಿ ಹಾಗು ತಿಂಗಳಿಗೆ 1 ಲಕ್ಷ ಅಥವಾ ಅದಕ್ಕಿಂತ ಹೆಚ್ಚು ಸಂಪಾದಿಸಿರಿ. ಸಣ್ಣ ಮಟ್ಟದ ಬಂಡಾವಳ ಹೂಡಿಕೆ ಮಾಡಿ, ನಮ್ಮೊಂದಿಗೆ ಪಾಲುದಾರರಾಗಿ..
ತಿಂಗಳಿಗೆ 1 ಲಕ್ಷ ಅಥವಾ ಅದಕ್ಕಿಂತ ಹೆಚ್ಚು ಸಂಪಾದಿಸಿರಿ : 7338463571

Back to top button