Follow Us On

WhatsApp Group
Important
Trending

ಗಾಂಜಾ ಮಾರಾಟ ವೇಳೆ ಕಾರ್ಯಾಚರಣೆ: ಗಾಂಜಾ ಸಮೇತ ಆರೋಪಿಯ ಬಂಧನ

ಕಾರವಾರ: ಸತತವಾದ ಪೊಲೀಸರ ಕಾರ್ಯಾಚರಣೆ ನಡುವೆಯೂ ಜಿಲ್ಲೆಯಲ್ಲಿ ಗಾಂಜಾ ಮಾರಾಟ ಪ್ರಕರಣ ಹೆಚ್ಚುತ್ತಿದೆ. ಇದೀಗ ತಾಲೂಕಿನ ಕೋಡಿಬಾಗದ ಸಾಗರ ದರ್ಶನ ಹಾಲ್‌ನ ಹಿಂಭಾಗದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಯುವಕನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕೋಡಿಬಾಗದ ಸಾಗರ ದರ್ಶನ ಹಾಲ್‌ನ ಹಿಂಭಾಗದಲ್ಲಿ ಆರೋಪಿ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿರುವಾಗ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ಆರೋಪಿಯನ್ನು ಬಂಧಿಸಲಾಗಿದೆ.

ಬoಧಿತ ಆರೋಪಿ ಹಜರತ್‌ಅಲಿ ಮೆಹಬೂಬಸಾಬ್ ಕಲಕೇರಿ (21). ಕಾರ್ಯಾಚರಣೆ ವೇಳೆ 20 ಸಾವಿರ ರೂ. ಮೌಲ್ಯದ 520 ಗ್ರಾಂ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗಾಂಝಾ ಮಾರಾಟಕ್ಕೆ ಬಳಸಲಾದ ಸ್ಕೂಟರ್ ಅನ್ನು ಸಹ ವಶಕ್ಕೆ ಪಡೆಯಲಾಗಿದ್ದು, ಆರೋಪಿತನ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಕಾರವಾರ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button