Follow Us On

WhatsApp Group
Uttara Kannada
Trending

ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಶಿಕ್ಷಕರಾದ ಸಾಧಕರಿಗೆ ಸನ್ಮಾನ

ಹೊನ್ನಾವರ: ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹೊನ್ನಾವರದ ವತಿಯಿಂದ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಶಿಕ್ಷಕರಾದ ಶ್ರೀಮತಿ ಬಿಬಿ ಪರಿದಾ ಶೇಖ ಮತ್ತು ಶ್ರೀ ಸತ್ಯನಾರಾಯಣ ಎಲ್. ಹೆಗಡೆ ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಹೊನ್ನಾವರದ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಶ್ರೀ ಎಸ್. ಎಂ. ಹೆಗಡೆ ರವರು ಮಾತನಾಡಿ ತಾಲೂಕಿನ ಉತ್ತಮ ಶಿಕ್ಷಕರಿಗೆ ಜಿಲ್ಲಾ ಪ್ರಶಸ್ತಿ ದೊರೆತ್ತಿರುವುದು ತುಂಬಾ ಸಂತೋಷದ ಸಂಗತಿ, ಪ್ರಶಸ್ತಿ ಶಿಕ್ಷಕರ ಜವಾಬ್ದಾರಿ ಹೆಚ್ಚಿಸುತ್ತದೆ ಹಾಗೂ ಉಳಿದ ಶಿಕ್ಷಕರಿಗೆ ಇದು ಸ್ಫೂರ್ತಿ ಮತ್ತು ಮಾದರಿಯಾಗಿರುತ್ತದೆ. ಪ್ರಶಸ್ತಿ ಪಡೆದ ಇರ್ವ ಶಿಕ್ಷಕರು ತುಂಬಾ ಪ್ರತಿಭಾವಂತರು ಅವರ ಶಾಲಾ ವ್ಯಾಪ್ತಿಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಇದು ಇವರಿಗೆ ರಾಜ್ಯ ಮಟ್ಟದ ಪ್ರಶಸ್ತಿಗೆ ನಾಂದಿಯಾಗಲಿ ಎಂದು ಶುಭ ಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಎಂ.ಜಿ.ನಾಯ್ಕ ಮಾತನಾಡಿ ಜಿಲ್ಲಾ ಪ್ರಶಸ್ತಿ ಪಡೆದ ಶಿಕ್ಷಕರನ್ನು ಗೌರವಿಸುವುದು ತುಂಬಾ ಹೆಮ್ಮೆಯೆನಿಸುತ್ತದೆ. ನಮ್ಮ ತಾಲೂಕಿನ ಇರ್ವ ಉತ್ತಮ ಶಿಕ್ಷಕರಿಗೆ ಈ ಪ್ರಶಸ್ತಿ ದೊರೆತಿದೆ. ಈ ಸಂಧರ್ಭಕ್ಕೆ ಪ್ರಶಸ್ತಿಗೆ ಆಯ್ಕೆ ಮಾಡಿದ ಇಲಾಖೆಯ ಅಧಿಕಾರಿಗಳಿಗೆ ಧನ್ಯವಾದಗಳನ್ನು ಹೇಳಿದರು. ಶ್ರೀಮತಿ ಪರಿದಾ ಶೇಖ ಮತ್ತು ಶ್ರೀ ಸತ್ಯನಾರಾಯಣ ಎಲ್. ಹೆಗಡೆ ಇವರು ಜನಮಾನಸದಲ್ಲಿ ಉಳಿಯುವ ಶಿಕ್ಷಕರು ಮಕ್ಕಳೊಂದಿಗೆ ಮಕ್ಕಳಾದ ಅತ್ಯಂತ ಪ್ರೀತಿಯಿಂದ ತಮ್ಮ ಸೇವೆಯಲ್ಲಿ ತೊಡಗಿರುವ ಶಿಕ್ಷಕರಿಗೆ ದೊರೆಕಿರುವುದು ತುಂಬಾ ಸಂತೋಷದ ವಿಚಾರ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಗೌರಾವಾಧ್ಯಕ್ಷರಾದ ಸುದೀಶ ನಾಯ್ಕ, ಜಿಲ್ಲಾ ಉಪಾಧ್ಯಕ್ಷೆ ಶ್ರೀಮತಿ ಸಾಧನಾ ಬರ್ಗಿ, ಸಂಘದ ಕಾರ್ಯದರ್ಶಿ ಕೆ.ಎಂ.ಹೆಗಡೆ, ಖಜಾಂಚಿ ಎಂ ಎನ್ ಗೌಡ ಮಾತನಾಡಿದರು. ಪ್ರಾರಂಭದಲ್ಲಿ ಸಂಘಟನೆ ಕಾರ್ಯದರ್ಶಿ ಶ್ರೀಮತಿ ಶಾರದಾ ಹೆಗಡೆ ಪ್ರಾರ್ಥಿಸಿದರು. ಉಪಾಧ್ಯಕ್ಷರಾದ ಸುರೇಶ ನಾಯ್ಕ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಎಂ.ಡಿ.ನಾಯ್ಕ ವಂದಿಸಿದರು. ಸಹಕಾರ್ಯದರ್ಶಿ ಅಣ್ಣಪ್ಪ ನಾಯ್ಕ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು ಸದಸ್ಯರು ಶಿಕ್ಷಕರು ಹಾಜರಿದ್ದರು.

Back to top button