ಮೊಬೈಲ್‌ಗೆ ಕರೆನ್ಸಿ ಹಾಕಿಕೊಂಡು ಬರುತ್ತೇನೆ ಅಂತಾ ಹೋದವನು ನಾಪತ್ತೆ: ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಿ

ಸಿದ್ದಾಪುರ: ಮೊಬೈಲ್‌ಗೆ ಕರೆನ್ಸಿ ಹಾಕಿಕೊಂಡು ಬರುತ್ತೇನೆ ಅಂತಾ ಹೇಳಿ ಮನೆಯಿಂದ ಹೋಗಿದ್ದವನು ವಾಪಸ್ ಮನೆಗೆ ಬರದೇ ನಾಪತ್ತೆಯಾದ ಘಟನೆ ಪಟ್ಟಣದ ಗಂಗಾಬಿಕಾ ದೇವಾಲಯದ ಸಮೀಪ ರವೀಂದ್ರ ನಗರದಲ್ಲಿ ನಡೆದಿದೆ. ಕಾಣೆಯಾದ ವ್ಯಕ್ತಿ 5 ಅಡಿ ಎತ್ತರ, ಗೋದಿ ಮೈ ಬಣ್ಣ, ದುಂಡನೆ ಮುಖ, ಹೊಂದಿದ್ದು, ಮನೆಯಿಂದ ಹೋಗುವಾಗ ಕೇಸರಿ ಪಂಜೆ ನೀಲಿ ಶರ್ಟ್ ಧರಿಸಿದ್ದಾನೆ. ಕನ್ನಡ ಮಾತನಾಡುತ್ತಾನೆ.

ಕಾಣೆಯಾದ ಮಗನನ್ನು ಹುಡುಕಿಕೊಡುವಂತೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕಾಣೆಯಾದ ವ್ಯಕ್ತಿ ಪುಂಡಲೀಕ ಗೋವಿಂದ ಅಂಬಿಗ (32) ಪಟ್ಟಣದ ಗಂಗಾಬಿಕಾ ದೇವಾಲಯದ ಸಮೀಪ ರವೀಂದ್ರ ನಗರ ನಿವಾಸಿ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈ ರೀತಿಯ ಹೋಲಿಕೆ ಇರುವ ವ್ಯಕ್ತಿ ಕಂಡುಬoದಲ್ಲಿ ಹತ್ತಿರದ ಠಾಣೆಗೆ ಮಾಹಿತಿ ನೀಡುವಂತೆ ಕೋರಿದ್ದಾರೆ.

ವಿಸ್ಮಯ ನ್ಯೂಸ್, ಸಿದ್ದಾಪುರ

ನಿಮ್ಮೂರಲ್ಲೂ ಸೂಪರ್ ಸ್ಟೋರ್ ಮಾಡಬೇಕೆ?
ಸ್ಟೋರ್ ಕಿಂಗ್, ಸ್ಮಾರ್ಟ್ ಸೂಪರ್ ಸ್ಟೋರ್: ನಿಮಗೆ ನೀವೆ ಮಾಲೀಕರಾಗಿ ಜಿಲ್ಲೆ, ತಾಲೂಕು, ಹೋಬಳಿ ಮಟ್ಟದಲ್ಲಿ ತಂತ್ರಜ್ಞಾನ ಚಾಲಿತ ಸೂಪರ್ ಮಾರ್ಕೆಟ್ ನಿರ್ಮಿಸಿ ಹಾಗು ತಿಂಗಳಿಗೆ 1 ಲಕ್ಷ ಅಥವಾ ಅದಕ್ಕಿಂತ ಹೆಚ್ಚು ಸಂಪಾದಿಸಿರಿ. ಸಣ್ಣ ಮಟ್ಟದ ಬಂಡಾವಳ ಹೂಡಿಕೆ ಮಾಡಿ, ನಮ್ಮೊಂದಿಗೆ ಪಾಲುದಾರರಾಗಿ.. ನಿಮ್ಮೂರಲ್ಲೂ ಸೂಪರ್ ಮಾರ್ಕೆಟ್ ನಿರ್ಮಿಸಬೇಕೆಂದಿದ್ದರೆ, ಇದಕ್ಕಿಂತ ಒಳ್ಳೆಯ ಸುವರ್ಣಾವಕಾಶ ಇನ್ನೊಂದಿಲ್ಲ. ತಂತ್ರಜ್ಞಾನ, ಪ್ರಾಡೆಕ್ಟ್, ಲಾಜಿಸ್ಟಿಕ್ಟ್ ನಿಂದ ಹಿಡಿದು ಎಲ್ಲ ರೀತಿಯ ಬೆಂಬಲವನ್ನೂ ನಾವು ನಿಮಗೆ ನೀಡುತ್ತೇವೆ. ತಿಂಗಳಿಗೆ 1 ಲಕ್ಷ ಅಥವಾ ಅದಕ್ಕಿಂತ ಹೆಚ್ಚು ಸಂಪಾದಿಸಿರಿ : 7338463571

Exit mobile version