Follow Us On

WhatsApp Group
Focus News
Trending

ಕೆಟ್ಟು ನಿಂತಿರುವ ಲಾರಿಯೊಂದಕ್ಕೆ ಡಿಕ್ಕಿಹೊಡೆದ ದ್ವಿಚಕ್ರ ವಾಹನ ಸವಾರ ಗಂಭೀರ: ಈ ಅಪಘಾತಕ್ಕೆ ಹೊಣೆ ಯಾರು?

ಜೋಯ್ಡಾ: ಕೆಟ್ಟು ನಿಂತಿರುವ ಲಾರಿಯೊಂದಕ್ಕೆ, ದ್ವಿಚಕ್ರ ವಾಹನ ಸವಾರನೋರ್ವ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಬಾಪೇಲಿ ಕ್ರಾಸ್ ಬಳಿ ರಾಮನಗರ-ಕಾರವಾರ ಮಾರ್ಗದಲ್ಲಿ ನಡೆದಿದೆ. ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ತಲೆಗೆ ಗಂಭೀರ ಹೊಡೆತ ಬಿದ್ದಿದ್ದು, ಇಲ್ಲಿನ ಚಾಪೆಲಿ ನಿವಾಸಿ ಈಶ್ವರ ಗಜಾನನ ನಾಯ್ಕ (26) ಗಾಯಗೊಂಡ ವ್ಯಕ್ತಿ.

ಕಳೆದ ನಾಲ್ಕು ದಿನಗಳಿಂದ ರಸ್ತೆಯ ನಡುವೆಯೇ ಜೆಲ್ಲಿ ಕಲ್ಲು ತುಂಬಿದ ಲಾರಿಯೊಂದು ಕೆಟ್ಟು ನಿಂತಿದ್ದು, ವಾಹನದ ಹಿಂದೆ ಯಾವುದೇ ರಿಪ್ಲೆಕ್ಟರ್ ಕೂಡಾ ಇಲ್ಲ. ಹೀಗಾಗಿ ಹಿಂದಿನಿಂದ ಬರುವ ವಾಹನಗಳಿಗೆ ರಸ್ತೆಯಲ್ಲಿ ನಿಂತಿರುವ ವಾಹನ ರಾತ್ರಿ ವೇಳೆಯಲ್ಲಿ ಕಾಣುತ್ತಿಲ್ಲ. ಇದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಗಾಯಾಳುವನ್ನು ಜೋಯಿಡಾ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದೇ ಇರುವುದು ಈ ಅಪಘಾತವಾಗಲು ಕಾರಣವಾಗಿದೆ ಎನ್ನುವುದು ಸಾರ್ವಜನಿಕರ ಆರೋಪವಾಗಿದೆ. ಈ ಕೂಡಲೇ ರಸ್ತೆಯಲ್ಲಿ ನಿಂತಿರುವ ವಾಹನ ತೆರವುಗೊಳಿಸಿ ಮುಂದೆ ಆಗುವ ಅನಾಹುತ ತಪ್ಪಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ವಿಸ್ಮಯ ನ್ಯೂಸ್ ಜೋಯ್ಡಾ

ನಿಮ್ಮೂರಲ್ಲೂ ಸೂಪರ್ ಸ್ಟೋರ್ ಮಾಡಬೇಕೆ?
ಸ್ಟೋರ್ ಕಿಂಗ್, ಸ್ಮಾರ್ಟ್ ಸೂಪರ್ ಸ್ಟೋರ್: ನಿಮಗೆ ನೀವೆ ಮಾಲೀಕರಾಗಿ ಜಿಲ್ಲೆ, ತಾಲೂಕು, ಹೋಬಳಿ ಮಟ್ಟದಲ್ಲಿ ತಂತ್ರಜ್ಞಾನ ಚಾಲಿತ ಸೂಪರ್ ಮಾರ್ಕೆಟ್ ನಿರ್ಮಿಸಿ ಹಾಗು ತಿಂಗಳಿಗೆ 1 ಲಕ್ಷ ಅಥವಾ ಅದಕ್ಕಿಂತ ಹೆಚ್ಚು ಸಂಪಾದಿಸಿರಿ. ಸಣ್ಣ ಮಟ್ಟದ ಬಂಡಾವಳ ಹೂಡಿಕೆ ಮಾಡಿ, ನಮ್ಮೊಂದಿಗೆ ಪಾಲುದಾರರಾಗಿ.. ನಿಮ್ಮೂರಲ್ಲೂ ಸೂಪರ್ ಮಾರ್ಕೆಟ್ ನಿರ್ಮಿಸಬೇಕೆಂದಿದ್ದರೆ, ಇದಕ್ಕಿಂತ ಒಳ್ಳೆಯ ಸುವರ್ಣಾವಕಾಶ ಇನ್ನೊಂದಿಲ್ಲ. ತಂತ್ರಜ್ಞಾನ, ಪ್ರಾಡೆಕ್ಟ್, ಲಾಜಿಸ್ಟಿಕ್ಟ್ ನಿಂದ ಹಿಡಿದು ಎಲ್ಲ ರೀತಿಯ ಬೆಂಬಲವನ್ನೂ ನಾವು ನಿಮಗೆ ನೀಡುತ್ತೇವೆ. ತಿಂಗಳಿಗೆ 1 ಲಕ್ಷ ಅಥವಾ ಅದಕ್ಕಿಂತ ಹೆಚ್ಚು ಸಂಪಾದಿಸಿರಿ : 7338463571

Back to top button