ಅಡ್ಡಬಂದ ಆಕಳನ್ನು ತಪ್ಪಿಸಲು ಹೋಗಿ ನಡುರಸ್ತೆಯಲ್ಲೇ ಕಾರು ಪಲ್ಟಿ: ಐವರಿಗೆ ಗಾಯ

ಕುಮಟಾ: ಅಡ್ಡಬಂದ ಆಕಳನ್ನು ತಪ್ಪಿಸಲು ಹೋಗಿ ಕಾರೊಂದು ನಡುರಸ್ತೆಯಲ್ಲೇ ಪಲ್ಟಿಯಾದ ಘಟನೆ ತಾಲೂಕಿನ ಮಿರ್ಜಾನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಕಾರೊಂದು ವೇಗವಾಗಿ ಚಲಿಸುತ್ತಿತ್ತು. ಈ ವೇಳೆ ಏಕಾಏಕಿ ರಸ್ತೆಯಲ್ಲಿ ಆಕಳು ಅಡ್ಡ ಬಂದಿದೆ. ಹೀಗಾಗಿ ಆಕಳನ್ನು ಉಳಿಸಲು ಚಾಲಕ ದಿಢೀರ್ ಆಗಿ ಬ್ರೇಕ್ ಹಾಕಿದ್ದು, ಕಾರು ನಿಯಂತ್ರಣ ತಪ್ಪಿ, ಪಲ್ಟಿಯಾಗಿದೆ ಎನ್ನಲಾಗಿದೆ.

ಹೌದು, ಅಂಕೋಲಾ ಕಡೆಯಿಂದ ಕುಮಟಾ ಕಡೆಗೆ ತೆರಳುತ್ತಿರುವ ಕಾರಿಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ಐವರು ಗಾಯಗೊಂಡಿದ್ದಾರೆ. ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನ ಬಾಣಾವಾರದ ನಿವಾಸಿ ಕೃಷ್ಣಮೂರ್ತಿ ಬಿ. ಆರ್, ವಿನಯ್ ಕಸ್ತೂರಪ್ಪ, ರಘು ಬಿ. ಆರ್, ಸುಜ ಗಂಗಾಧರ ಹಾಗೂ ಚಾಲಕ ಕಲ್ಲೇಶ ಕಾಂತರಾಜು ಗಾಯಗೊಂಡವರು. ದುರ್ಘಟನೆಯಲ್ಲಿ ಗಾಯಗೊಂಡವರನ್ನು 108 ಅಂಬ್ಯುಲೆನ್ಸ್ ಮೂಲಕ ಕುಮಟಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಸ್ಮಯ ನ್ಯೂಸ್, ಕುಮಟಾ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Exit mobile version