ಹಳ್ಳಿ ಜನರ ತುರ್ತು ಆರೋಗ್ಯ ಸೇವೆಗಾಗಿ ಆಂಬ್ಯುಲೆನ್ಸ್: ದೇಶಪಾಂಡೆ

ಜೋಯಿಡಾ: ರಾಮನಗರ ಸುತ್ತಲಿನ ಹಳ್ಳಿಗಳ ಜನರಿಗೆ ತುರ್ತು ಆರೋಗ್ಯ ಸೇವೆಗಾಗಿ ಈ ಆಂಬ್ಯುಲೆನ್ಸ್ ನೀಡಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಲಿ ಎಂದು ಶಾಸಕ ಆರ್.ವಿ ದೇಶಪಾಂಡೆ ಹೇಳಿದರು. ಅವರು ವೋಲ್ವೋ ಕಂಪನಿ ವತಿಯಿಂದ ಸರಕಾರಿ ಪ್ರಾಥಮಿಕ ಕೇಂದ್ರ ರಾಮನಗರಕ್ಕೆ ಅಂಬ್ಯುಲೆನ್ಸ್ ಅನ್ನು ಹಸ್ತಾಂತರ ಮಾಡಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾಜಿ ಜಿ.ಪಂ ಸದಸ್ಯ ಸಂಜಯ ಹಣಬರ, ಜಿಲ್ಲಾ ಅರೋಗ್ಯ ಅಧಿಕಾರಿ ಶರದ್ ನಾಯ್ಕ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸದಾನಂದ ದಬ್ಗಾರ,ತಾಲೂಕಾ ವೈಧ್ಯಾಧಿಕಾರಿ ಸುಜಾತಾ ಉಕ್ಕಲಿ,ಜೊಯಿಡಾ ತಹಸಿಲ್ದಾರ ಸಂಜಯ ಕಾಂಬಳೆ, ಮುಂತಾದವರು ಇದ್ದರು.

ವಿಸ್ಮಯ ನ್ಯೂಸ್, ಜೋಯಿಡಾ

Exit mobile version