Follow Us On

WhatsApp Group
Important
Trending

ನಿಲ್ಲಿಸಿಟ್ಟಿದ್ದ ಕಾರ್ ಒಳಗಿದ್ದ ಬಂಗಾರದ ಚೈನ್ ಕಳ್ಳತನ ಮಾಡಿ ಪರಾರಿಯಾಗಿದ್ದ ಕಳ್ಳ ಅಂದರ್: ಚಿನ್ನದ ಚೈನು ವಶಕ್ಕೆ

ಶಿರಸಿ: ನಿಲ್ಲಿಸಿಟ್ಟಿದ್ದ ಕಾರ್ ಒಳಗಿದ್ದ ಬಂಗಾರದ ಚೈನ್ ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಇಲ್ಲಿನ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಕಾರಿನ ಒಳಗಡೆ ಬ್ಯಾಗಿನಲ್ಲಿ ಇಟ್ಟಿದ್ದ 13 ಗ್ರಾಮ್ ತೂಕದ 55 ಸಾವಿರ ರೂಪಾಯಿ ಬೆಲೆ ಬಾಳುವ ಬಂಗಾರದ ಚೈನ್ ಕಳ್ಳತನ ಮಾಡಿದ್ದ. ಕೊನೆಗೂ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಮೋಹನ ನಾಯ್ಕ ಮಲ್ಲತಳ್ಳಿ ಬಂಧಿತ ಆರೋಪಿ. ಈತ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೋಣನಬಿಡಕಿ ಟೆಂಪೊ ಸ್ಟಾಂಡ್ ಹತ್ತಿರ ಸಂತೋಷ ಚೌರದ ಇವರಿಗೆ ಸೇರಿದ್ದ ಕಾರಿನ ಒಳಗಡೆ ಬ್ಯಾಗಿನಲ್ಲಿ ಇಟ್ಟಿದ್ದ ಚಿನ್ನವನ್ನು ಹೊಂಚುಹಾಕಿ ಎಗರಿಸಿದ್ದ. ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಧಿತನಿoದ ಕಳುವಾದ ಸ್ವತ್ತನ್ನು ಪೊಲೀಸರು ವಶಪಡಿಸಿಕೊಂಡಿದ್ದು, ತನಿಖೆ ಮುಂದುವರೆದಿದೆ.

ವಿಸ್ಮಯ ನ್ಯೂಸ್, ಶಿರಸಿ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button