Follow Us On

WhatsApp Group
Important
Trending

ರಸ್ತೆ ಬದಿಯಲ್ಲಿ ಸೈಕಲ್ ನಿಲ್ಲಿಸಿ ಮಾತಾಡುತ್ತಿದ್ದವರ ಮೇಲೆ ಬಂದೆರಗಿದ ಟಿಪ್ಪರ್: ಟಿಪ್ಪರ್ ಪಲ್ಟಿಯಾದ ವೇಳೆ ಸಿನಿಮೀಯ ರೀತಿಯಲ್ಲಿ ಪ್ರಾಣ ಉಳಿಸಿಕೊಂಡ ಸೈಕಲ್ ಸವಾರರು!

ಕುಮಟಾ: ಸ್ಟೇರಿಂಗ್ ಲಾಕ್ ಆದ ಪರಿಣಾಮ ಚಲಿಸುತ್ತಿದ್ದ ಟಿಪ್ಪರೊಂದು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉರುಳಿಬಿದ್ದ ಘಟನೆ ನಡೆದಿದೆ. ಲಾರಿ ಪಲ್ಟಿಯಾದ ವೇಳೆ ರಸ್ತೆ ಬದಿಯಲ್ಲಿ ಸೈಕಲ್ ನಿಲ್ಲಿಸಿ ಮಾತಾಡುತ್ತಿದ್ದ ಇಬ್ಬರು ಉರುಳಿ ಬೀಳುತ್ತಿರುವ ಟಿಪ್ಪರ್ ಅಡಿಯಲ್ಲಿ ಸಿಲುಕಿದ್ದರು. ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಘಟನೆ ಸಿನಿಮಾ ಶೈಲಿಯಲ್ಲಿ ನಡೆದಿದೆ ಎಂದು ಪ್ರತ್ಯಕ್ಷ ದರ್ಶಿಗಳು ಮಾಹಿತಿ ನೀಡಿದ್ದಾರೆ. ಟಿಪ್ಪರ್ ಉರುಳುತ್ತಿರುವಾಗ ಸೈಕಲ್ ನಿಲ್ಲಿಸಿ ಮಾತನಾಡುತ್ತಿದ್ದ ಇಬ್ಬರೂ ಅಲ್ಲೇ ಮಲಗಿ, ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಟಿಪ್ಪರ್ ಉರುಳುತ್ತಿರುವಂತೆ ಅದರ ಚಕ್ರ ಹಾಗು ಇಂಜಿನ್ ನಡುವಿನ ಗ್ಯಾಪಿನಲ್ಲಿ ಉರುಳುತ್ತಾ ಕೆಳಗಿನ ಗಟಾರಕ್ಕೆ ಜಿಗಿದು, ಜೀವ ಉಳಿಸಿಕೊಂಡಿದ್ದಾರೆ.

ಈ ಘಟನೆ ನಡೆದಿರೋದು ರಾಷ್ಟ್ರೀಯ ಹೆದ್ದಾರಿ 66ರ ಗಿಬ್ ಹೈಸ್ಕೂಲ್ ಸಮೀಪ. ಲಾರಿ ಉರುಳುತ್ತಿದ್ದ ಕೂಡಲೇ ಸ್ಥಳಕ್ಕೆ ಆಗಮಿಸಿದ ಸಾರ್ವಜನಿಕರು ಇವರನ್ನು ಹೊರಗೆ ತೆಗೆದು ಜೀವ ಉಳಿಸಿದ್ದಾರೆ. ಟಿಪ್ಪರ್ ಉರುಳಿ ಮರಕ್ಕೆ ಬಡಿದು ನಿಂತಿದ್ದು, ಲಾರಿಯ ಚಾಲಕ ಸಹ ಅದೃಷ್ಟವಶಾಥ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಾಹಿತಿ ತಿಳಿದ ಕುಮಟಾ ಪಿಎಸ್‌ಐ ಆನಂದ ಮೂರ್ತಿ ಮತ್ತು ಪೊಲೀಸರು ಸ್ಥಳಕ್ಕೆ ಆಗಮಿಸಿದರು. ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು. ಇತ್ತಿಚಿನ ದಿನಗಳಲ್ಲಿ ಹೆದ್ದಾರಿಯಲ್ಲಿ ಅಪಘಾತ ಪ್ರಕರಣಗಳು ಹೆಚ್ಚುತ್ತಿದೆ. ಇದಕ್ಕೆಲ್ಲ ಚತುಷ್ಪದ ರಸ್ತೆ ಅಗಲೀಕರಣ ದೊಂಬರಾಟ ಎನ್ನುವ ಮಾತುಗಳು ಕೇಳಿಬರುತ್ತಿವೆ.

ವಿಸ್ಮಯ ನ್ಯೂಸ್, ಕುಮಟಾ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button