Important
Trending

ಮನೆಯಿಂದ ಹೊರಗಡೆ ತಿರುಗಾಡಿಕೊಂಡು ಬರುವುದಾಗಿ ಹೇಳಿ ಹೋದವನು ಕೆರೆಯಲ್ಲಿ ಶವವಾಗಿ ಪತ್ತೆ


ಯಲ್ಲಾಪುರ: ವ್ಯಕ್ತಿಯ ಶವವೊಂದು ಕೆರೆಯಲ್ಲಿ ತೇಲುತ್ತಿತ್ತು. ದಾರಿಯಲ್ಲಿ ಸಾಗುವವರು ಶವವನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಹೌದುಪಟ್ಟಣದ ಜೋಡುಕೆರೆಯಲ್ಲಿ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ.


ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಇದನ್ನೇ ಮನಸ್ಸಿಗೆ ಹೆಚ್ಚಿಕೊಂಡು ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಮನೆಯಿಂದ ಹೊರಗಡೆ ಸುಮ್ಮನೆ ತಿರುಗಾಡಿ ಬರುವುದಾಗಿ ಹೇಳಿ ಹೋದವರು ಬಹಳ ಸಮಯದವರೆಗೂ ಮನೆಗೆ ಬಂದಿರಲಿಲ್ಲ. ಹೀಗಾಗಿ ಮನೆಯವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ ಇದೀಗ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಮೃತಪಟ್ಟ ವ್ಯಕ್ತಿ ಪಟ್ಟಣದಲ್ಲಿ ಗ್ಯಾಸ್ ಸ್ಟೋವ್, ಕುಕ್ಕರ್ ಹಾಗೂ ಇತರೆ ವಸ್ತುಗಳನ್ನು ರಿಪೇರಿ ಮಾಡುವ ನೂತನ ನಗರ ನಿವಾಸಿ ಜಮಾಲ್ ಸಾಬ್ ಬೆಪಾರಿ ಎಂದು ಗುರುತಿಸಲಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪಿ.ಎಸ್.ಐ ಪ್ರಿಯಾಂಕ ಮತ್ತು ಪೊಲೀಸ್ ಸಿಬ್ಬಂದಿಗಳು ಶವವನ್ನು ಅಗ್ನಿಶಾಮಕ ಸಿಬ್ಬಂದಿಗಳ ಸಹಾಯದಿಂದ ಹೊರತೆಗೆದು ತಾಲೂಕು ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.


ವಿಸ್ಮಯ ನ್ಯೂಸ್, ಯಲ್ಲಾಪುರ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button