ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಬಾಡಿಗೆ ಮನೆಯಲ್ಲಿಯೇ ನೇಣಿಗೆ ಶರಣು : ಕಾರಣ ನಿಗೂಢ


ಕಾರವಾರ: ಯುವಕನೊಬ್ಬ ವಾಸವಿರುವ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ. ಇಲ್ಲಿನ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕ ನೇಣಿಗೆ ಶರಣಾಗಿದ್ದು, ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ.

ಸಾವಿಗೆ ಶರಣಾದ ಯುವಕನನ್ನು ಮೂಲತಃ ವಿಜಯಪುರ ನಿವಾಸಿಯಾದ ಸುದೀಪ ಬೋರಯ್ಯ ಎಂದು ಗುರುತಿಸಲಾಗಿದೆ. ಬಾಡಿಗೆ ಮನೆಯಲ್ಲಿ ಐವರು ಸ್ನೇಹಿತರ ಜೊತೆ ಈತ ವಾಸವಿದ್ದ. ಇದನನ್ನು ಗಮನಿಸಿದ ಸ್ನೇಹಿತರು ಗಾಬರಿಗೊಂಡು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

Exit mobile version