Follow Us On

WhatsApp Group
Important
Trending

ವಿವಾಹ ನಿಶ್ಚಿತಾರ್ಥವಾಗಿದ್ದ ಯುವತಿ ನಾಪತ್ತೆ: ಸಂಬಂಳ ತೆಗೆದುಕೊಂಡು ಬರುವುದಾಗಿ ಹೇಳಿ ಹೋಗಿದ್ದ ಯುವತಿ ಮರಳಿ ಮನೆಗೆ ಬಂದಿಲ್ಲ


ಕಾರವಾರ: ಮಂಗಳೂರು ನಗರದಲ್ಲಿ ಗಾರ್ಮೆಂಟ್ಸ್ ಕೆಲಸ ಮಾಡಿಕೊಂಡಿದ್ದ, ವಿವಾಹ ನಿಶ್ಚಿತಾರ್ಥವಾಗಿದ್ದ ಕಾರವಾರದ ಯುವತಿ ನಾಪತ್ತೆಯಾಗಿದ್ದಾಳೆ. ಮೂಲತಃ ಕಾರವಾರದ ನಿವಾಸಿಯಾಗಿದ್ದ ಅಂಜಲಿ ಆನಂದು ಕೊಠರಕರ (24) ನಾಪತ್ತೆಯಾದ ಯುವತಿ.

ಯುವತಿಗೆ ಮದುವೆ ನಿಶ್ಚಯವಾಗಿದ್ದು, ತಿಂಗಳ ಹಿಂದೆ ಕಾರವಾರದ ಮನೆಯಲ್ಲಿ 15 ದಿನಗಳವರೆಗೆ ಇದ್ದು, ಮಂಗಳೂರಿಗೆ ಕೆಲಸಕ್ಕೆ ವಾಪಸಾಗಿದ್ದಳು. ಸಂಬಳದ ಹಣ ತೆಗೆದುಕೊಂಡು ಮನೆಗೆ ಬರುವುದಾಗಿ ಪೋನ್ ಮೂಲಕ ತಿಳಿಸಿದ್ದರೂ, ಇನ್ನೂ ಬಂದಿಲ್ಲ. ಆಕೆಯ ಮೊಬೈಲ್ ಸ್ವಿಚ್ ಆಫ್ ಆಗಿದೆ.

ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗಾರ್ಮೆಂಟ್ಸ್ ನಲ್ಲಿ ವಿಚಾರಿಸಿದಾಗ ಅಕ್ಟೋಬರ್ 3ರಂದು ಊರಿಗೆ ಹೋಗುವುದಾಗಿ ಹೇಳಿದ್ದಾಳೆ. ಆದರೆ ಊರಿಗೂ ಬಾರದೆ, ಸಂಬಂಧಿಕರ ಮನೆಗೂ ಹೋಗದೆ ನಾಪತ್ತೆಯಾಗಿದ್ದಾಗಿ ಅವರ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

Back to top button