Follow Us On

WhatsApp Group
Important
Trending

ಕಾಲೇಜಿಗೆ ಹೋಗಿಬರುತ್ತೇನೆಂದು ಹೋದ ವಿದ್ಯಾರ್ಥಿನಿ ನಾಪತ್ತೆ: ಈಕೆಯ ಸುಳಿವು ಸಿಕ್ಕಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ

ಹೊನ್ನಾವರ: ಬಿ.ಕಾಂ.ವಿದ್ಯಾರ್ಥಿನಿಯೊಬ್ಬಳು ತನ್ನ ಮಾರ್ಕ್ಸ್ ಕಾರ್ಡ್ ತರುತ್ತೇನೆಂದು ಮನೆಯಲ್ಲಿ ಹೇಳಿ ಮನೆಯಿಂದ ಬಂದವಳು ಮರಳಿ ಮನೆಗೂ ಬಾರದೆ ಸಂಬoಧಿಕರ ಮನೆಗೂ ತೆರಳದೆ ನಾಪತ್ತೆಯಾಗಿದ್ದಾಳೆ. ಮಗಳನ್ನು ಹುಡುಕಿಕೊಡಿ ಎಂದು ಪೊಲೀಸ್ ಠಾಣೆಯಲ್ಲಿ ತಂದೆ ಪ್ರಕರಣ ದಾಖಲಿಸಿದ್ದಾರೆ.


ಹೊನ್ನಾವರ ತಾಲೂಕಿನ ಚಿಕ್ಕನಕೋಡದ ಕುಮಾರಿ ಗಾಯತ್ರಿ ರಾಮನಾಥ ನಾಯ್ಕ ಕಾಣೆಯಾದ ವಿದ್ಯಾರ್ಥಿನಿ. ಈಕೆ ಅಕ್ಟೋಬರ್ 9 ರಂದು ಹೊನ್ನಾವರದಲ್ಲಿರುವ ಕಾಲೇಜಿಗೆ ಹೋಗಿ ಮಾರ್ಕ್ಸ್ ಕಾರ್ಡ್ ತರುತ್ತೇನೆ ಎಂದು ಮನೆಯಲ್ಲಿ ಹೇಳಿ ಹೋಗಿದ್ದಳು ಎನ್ನಲಾಗಿದೆ. ಆದರೆ ಸಂಜೆಯಾದರೂ ಮಗಳು ಮನೆಗೆ ಬಂದಿಲ್ಲ. ಇದರಿಂದ ಮನೆಯವರು ಆತಂಕಗೊoಡು, ಸಂಬoಧಿಕರ ಮನೆಯಲ್ಲೂ ವಿಚಾರಿಸಿದ್ದಾರೆ.

ಮನೆಯೂ ಸೇರಿದಂತೆ ಬಹುತೇಕ ಕಡೆ ಹುಡುಕಿದರೂ ವಿದ್ಯಾರ್ಥಿನಿಯ ಪತ್ತೆಯಾಗಿಲ್ಲ. ದಿಕ್ಕು ತೋಚದಂತಾದ ಪಾಲಕರು ಇಂದು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಮಗಳನ್ನು ಹುಡುಕಿಕೊಡುವಂತೆ ಮನವಿ ಮಾಡಿದ್ದಾರೆ.


ವಿಸ್ಮಯ ನ್ಯೂಸ್, ಹೊನ್ನಾವರ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button