ಬಸ್ ಮತ್ತು ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

ಭಟ್ಕಳ: ತಾಲೂಕಿನ ಸಾಗರ ರಸ್ತೆಯ ಅಗ್ನಿಶಾಮಕ ದಳದ ಕಛೇರಿ ಮುಂಬಾಗ ಅಪಾಯಕಾರಿ ತಿರುವಿನಲ್ಲಿ ಬೈಕ್ ಹಾಗೂ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿರುವ ಘಟನೆ ನಡೆದಿದೆ.

ಕೊಲ್ಲಾಪುರದದಿಂದ ಭಟ್ಕಳಕ್ಕೆ ಬಂದ ಸರ್ಕಾರಿ ಬಸ್ ಪ್ರಯಾಣಿಕನ್ನು ಬಿಟ್ಟು ಭಟ್ಕಳದ ಸಾಗರ ರಸ್ತೆಯ ಡಿಪ್ಪೋಗೆ ತೆರಳುವ ವೇಳೆ ಇಲ್ಲಿನ ಅಗ್ನಿಶಾಮಕ ದಳದ ಕಛೇರಿ ಮುಂಬಾಗದ ತಿರುವಿನಲ್ಲಿ ಎದುರಿನಿಂದ ಬಂದ ಬೈಕ್ ನಡುವೆ ಅಪಘಾತದ ಸಂಬವಿಸಿದೆ.

ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡಿದ್ದು ತಾಲೂಕಾಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ  ಉಡುಪಿಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ.

ಸ್ಥಳಕ್ಕೆ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಫಘಾತಕ್ಕೆ ಮುಖ್ಯ ಕಾರಣ ಯಾರಿಂದ ತಪ್ಪಾಗಿದೆ ಎಂಬ ಹೆಚ್ಚಿನ ಮಾಹಿತಿ ಪೊಲೀಸ ತನಿಖೆಯಿಂದ ತಿಳಿದು ಬರಬೇಕಿದೆ.

ವಿಸ್ಮಯ ನ್ಯೂಸ್ ಉದಯ್ ಎಸ್ ನಾಯ್ಕ ಭಟ್ಕಳ

Exit mobile version