ಮಿನಿ ಟ್ರಕ್ ಹಾಗು ಸ್ಕೂಟಿ ನಡುವೆ ಅಪಘಾತ: ಟ್ರಕ್ ನ ಹಿಂದಿನ ಚಕ್ರಕ್ಕೆ ಸ್ಕೂಟಿ ಸಿಲುಕಿ ಸವಾರ ಗಂಭೀರ ಗಾಯ

ಕುಮಟಾ: ಮಿನಿ ಟ್ರಕ್ ಹಾಗು ಸ್ಕೂಟಿ ನಡುವೆ ಅಪಘಾತ ಸಂಭವಿಸಿದ್ದು, ಸ್ಕೂಟಿ ಸವಾರ ಗಂಭೀರ ಗಾಯಗೊಂಡ‌ ಘಟನೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡವರು ಗೋಕರ್ಣದ ನಿವಾಸಿ ಪಾಂಡುರಂಗ ಭಟ್ಟ ಎಂದು ತಿಳಿದುಬಂದಿದೆ.

ಕುಮಟಾದಿಂದ ಗೋಕರ್ಣ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಮಿನಿ ಟ್ರಕ್ ನ ಹಿಂದಿನ ಚಕ್ರಕ್ಕೆ ಸ್ಕೂಟಿ ಸಿಲುಕಿದ್ದು,‌ಅಚ್ಚರಿಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ದುರ್ಘಟನೆಯಲ್ಲಿ ವ್ಯಕ್ತಿಯ ಕಾಲಿಗೆ ಗಂಭೀರ ಪೆಟ್ಟು ಬಿದ್ದಿದೆ. ಸ್ಥಳೀಯರೆಲ್ಲರು ಸೇರಿ ಖಾಸಗಿ ಅಂಬುಲೆನ್ಸ್ ಮೂಲಕ ಅಪಘಾತಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ವಿಸ್ಮಯ ನ್ಯೂಸ್ ಕುಮಟಾ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Exit mobile version