ಉಪಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಎಲ್ಲರೂ ಸಹಕರಿಸಿ: ಸಚಿವ‌ ಶಿವರಾಮ್ ಹೆಬ್ಬಾರ್

ಯಲ್ಲಾಪುರ: ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ತಾಲೂಕಿನ ಪಾಳಾದಲ್ಲಿ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಅಂಗವಾಗಿ ಕಾರ್ಯಕರ್ತ ಸಭೆ ನಡೆಸಿದರು‌.

ಈ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮುಂಡಗೋಡ ತಾಲೂಕಿನ ಕಾರ್ಯಕರ್ತರು ಪಕ್ಷ ಗೆಲುವಿಗೆ ಶ್ರಮವಹಿಸಿ ಕಾರ್ಯನಿರ್ವಹಿಸುವಂತೆ ಕಾರ್ಯಕರ್ತರಿಗೆ ಸಚಿವರು ಕರೆ ನೀಡಿದರು.

ಈ ವೇಳೆ ಮೌನಾಚರಣೆ ಸಲ್ಲಿಸುವ ಮೂಲಕವಾಗಿ ಅಗಲಿರುವ ಜಿಲ್ಲೆಯ ಹಿರಿಯ ಚೇತನ ಡಾ.ಎಂ.ಪಿ. ಕರ್ಕಿ ಅವರಿಗೆ ಶ್ರದ್ದಾಂಜಲಿ ಸಲ್ಲಿಸಿದರು.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Exit mobile version