Follow Us On

WhatsApp Group
Important
Trending

ಹೀರೆಕಾಯಿ ಕೊಯ್ಯುವಾಗ ಅವಾಂತರ: ಕೃಷಿಕ ಸಾವು

ಭಟ್ಕಳ: ತೋಟದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಕೃಷಿಕನೋರ್ವ ಸಾವನ್ನಪ್ಪಿರುವ ಘಟನೆ ಮಾರುಕೇರಿಯ ಹೂತ್ಕಲದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ನಾಗೇಶ ಮಂಜಯ್ಯ ಭಟ್(48) ಎಂದು ಗುರುತಿಸಲಾಗಿದೆ. ಈತ ತಮ್ಮ ಮನೆಯ ಮುಂದಿನ ತೋಟದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ ಕೊಕ್ಕೆಯನ್ನು ಕೈಯಲ್ಲಿ ಹಿಡಿದು ಹೀರೆಕಾಯಿ ಕೊಯ್ಯುತ್ತಿರುವಾಗ ಆಕಸ್ಮಿಕವಾಗಿ ಕೈಯಲ್ಲಿದ್ದ ಕೊಕ್ಕೆ ವಿದ್ಯುತ್ ತಂತಿಗೆ ತಗುಲಿದೆ. ಕೊಕ್ಕೆಯ ಮುಖಾಂತರ ಮೃತ ವ್ಯಕ್ತಿಯ ಎಡೆಯ ಭಾಗಕ್ಕೆ ವಿದ್ಯುತ್ ಸ್ಪರ್ಶಿಸಿದೆ.

ಈ ವೇಳೆ ಸ್ಥಳದಲ್ಲೇ ಕುಸಿದು ಬಿದ್ದಿದ್ದು, ನಂತರ ವ್ಯಕ್ತಿಯನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆ ಸಾವನ್ನಪ್ಪಿದ್ದಾನೆ. ಈ ಕುರಿತು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್ ಉದಯ್ ಎಸ್ ನಾಯ್ಕ ಭಟ್ಕಳ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button