ನಿಂತ ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ: ಮಗಳ ಮನೆಗೆ ಬಂದಿದ್ದ ಬೈಕ್ ಸವಾರ ಸಾವು

ಶಿರಸಿ: ನಿಂತ ಬೈಕ್‌ಗೆ ಸಾರಿಗೆ ಬಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟಿದ್ದಾನೆ. ಈ ಘಟನೆ ನಡೆದಿರೋದು ಗೋಟಗೋಡಿ ಕೊಪ್ಪ ಕ್ರಾಸ್ ಸನಿಹ ಶಿರಸಿ ಹುಬ್ಬಳ್ಳಿ ರಾಜ್ಯ ಹೆದ್ದಾರಿಯಲ್ಲಿ.

ಮಳಗಿ ಪಂಚಾಯತ ವ್ಯಾಪ್ತಿಯ ಅಬ್ದುಲ್ಗನಿಸಾಬ ಅಲೀಸಾಬ ಶಿರಗೋಡ (69) ಮೃತ ವ್ಯಕ್ತಿ ಎಂದು ತಿಳಿದುಬಂದಿದೆ. ಈತ ಹರಗನಹಳ್ಳಿಯಿಂದ ಭದ್ರಾಪುರ ಗ್ರಾಮದಲ್ಲಿರುವತನ್ನ ಮಗಳ ಮನೆಗೆ ಬಂದಿದ್ದ. ಈ ವೇಳೆ ಕ್ರಾಸ್ ಸನಿಹದಲ್ಲಿ ರಸ್ತೆಯಂಚಿಗೆ ಬೈಕ್ ನಿಲ್ಲಿಸಿದ್ದ ವೇಳೆ ಎದುರಿಗೆ ಹುಬ್ಬಳ್ಳಿಯಿಂದ ಶಿರಸಿ ಕಡೆ ವೇಗವಾಗಿ ಹೋಗುತ್ತಿದ್ದ ಬಸ್ ಚಾಲಕನಿಗೆ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.

ಡಿಕ್ಕಿ ರಭಸಕ್ಕೆ ಬೈಕ್ ಸವಾರ ಅಬ್ದುಲ್‌ಗನಿ ತೀವ್ರವಾಗಿ ಗಾಯಗೊಂಡಿದ್ದ ಎನ್ನಲಾಗಿದೆ. ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ಗೆ ಸಾಗಿಸುತ್ತಿರುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾನೆ.

ವಿಸ್ಮಯ ನ್ಯೂಸ್, ಶಿರಸಿ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸಬಲ್ಲದು.

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Exit mobile version