ಮಿರ್ಜಾನಿನ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್, ಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ ವಾಲ್ಮೀಕಿ ಜಯಂತಿ ಆಚರಣೆ

ಕುಮಟಾ: ಮಿರ್ಜಾನಿನ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್, ಬಿಜಿಎಸ್ ಕೇಂದ್ರೀಯ ವಿದ್ಯಾಲಯದಲ್ಲಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಸಂಸ್ಥೆಯ ಪ್ರಾಚಾರ್ಯರಾದ ಲೀನಾ ಗೊನೇಹಳ್ಳಿಯವರು ವಾಲ್ಮೀಕಿಯ ತಪಸ್ಸು, ಏಕಾಗ್ರತೆ, ತಾಳ್ಮೆ ಮತ್ತು ಸಾಧನೆ ಮತ್ತು ಕುರಿತು ಮಾತನಾಡಿ ವಿದ್ಯಾರ್ಥಿಗಳು ಕೂಡ ಏಕಾಗ್ರತೆ ಮತ್ತು ತಾಳ್ಮೆ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಆಸಕ್ತಿಯಿಂದ ಅಧ್ಯಯನ ಮಾಡಬೇಕು ಎಂದರು. ಎಂ. ಜಿ. ಹಿರೇಕುಡಿ, ಅನುರಾಧ ಗುನಗ ಮತ್ತು ರಮೇಶ ವಿ. ನಾಯ್ಕ ವಾಲ್ಮೀಕಿ ಜಯಂತಿ ಬಗ್ಗೆ ಉಪನ್ಯಾಸ ನೀಡಿದರು.

ವಿಸ್ಮಯ ನ್ಯೂಸ್, ಕುಮಟಾ

Exit mobile version