ಒಂಟಿ ಮನೆಯಲ್ಲಿ ಕಳ್ಳತನ: ಕೂಲಿ ಕೆಲಸಕ್ಕೆ ಬಳಸುವ ಸಾಮಾಗ್ರಿ, ಟಿವಿ ಕದ್ದೊಯ್ದ ಕಳ್ಳರು!

ಭಟ್ಕಳ: ಒಂಟಿ ಮನೆಯಲ್ಲಿ ಕಳ್ಳತನ ನಡೆದಿರುವ ಘಟನೆ ಜಾಲಿ ಆಜಾದ್ ನಗರ 7ನೇ ಕ್ರಾಸನ ಅಬುಹನೀಫಾ ಸ್ಟ್ರೀಟನಲ್ಲಿನ ಬೆಳಕಿಗೆ ಬಂದಿದೆ. ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿದ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಕಳ್ಳತನವಾದ ಮನೆಯಲ್ಲಿ ಉತ್ತರ ಪ್ರದೇಶ ಕೂಲಿ ಕಾರ್ಮಿಕರು ವಾಸವಾಗಿದ್ದು. ಇವರು ತಮ್ಮ ಕೆಲಸದ ನಿಮಿತ್ತ ಒಂದು ವಾರದ ಹಿಂದೇ ಕೆಲಸಕ್ಕಾಗಿ ಹೊನ್ನಾವರಕ್ಕೆ ತೆರಳಿದ್ದರು.

ತಮ್ಮ ಕೆಲಸ ಮುಗಿಸಿ ಶುಕ್ರವಾರ ಬೆಳಿಗ್ಗೆ ತಾವು ವಾಸವಿದ್ದ ಬಾಡಿಗೆ ಮನೆಗೆ ಬಂದು ನೋಡಿದಾಗ ಕಳ್ಳತನವಾಗಿರುವ ಬಗ್ಗೆ ತಿಳಿದು ಬಂದಿದೆ. ಕೂಲಿ ಕೆಲಸಕ್ಕೆ ಬಳಸುವ ಸಾಮಾಗ್ರಿ, ಟಿವಿ ಕಳ್ಳತನವಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ ಮಾಹಿತಿ ಪೊಲೀಸ ತನಿಖೆಯಿಂದ ತಿಳಿದು ಬರಬೇಕಾಗಿದೆ . ಸ್ಥಳಕ್ಕೆ ಪಿ.ಎಸ್.ಐ ಭರತ್ ಕುಮಾರ ಹಾಗೂ ಪೊಲೀಸ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸಬಲ್ಲದು.

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Exit mobile version