ಪುರಾಣ ಪ್ರಸಿದ್ಧ ಮಹಾಬಲೇಶ್ವರ ದೇವಾಲಯದಲ್ಲಿ ಶಾಸಕರಿಂದ ವಿಶೇಷ ಪೂಜೆ: ಅಮೃತಾನ್ನಕ್ಕೆ ಮತ್ತೆ ಚಾಲನೆ

ಗೋಕರ್ಣ: ಇಲ್ಲಿನ ಪುರಾಣ ಪ್ರಸಿದ್ಧ ಮಹಾಬಲೇಶ್ವರ ದೇವಾಲಯಕ್ಕೆ ಕುಮಟಾ ಶಾಸಕ ದಿನಕರ ಶೆಟ್ಟಿ ಅವರು ಭೇಟಿ ನೀಡಿ ಆತ್ಮಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ಆತ್ಮಲಿಂಗಕ್ಕೆ ಪೂಜೆ ಸಲ್ಲಿಸುವ ಮೊದಲು ಮಹಾಗಣಪತಿ ದೇವಾಲಯಕ್ಕೆ ತೆರಳಿ ಶುಭ ಸಂದರ್ಭದಲ್ಲಿ ಮಹಾಗಣಪತಿಗೆ ಪೂಜಿಸಿ, ಪ್ರಾರ್ಥಿಸಿದರು.ಉಪಾಧಿವಂತ ಮಂಡಳದ ಸದಸ್ಯರು ಪೂಜಾ ಕೈಂಕರ್ಯ ನೆರವೇರಿಸಿದರು. ಮಹಾಬಲೇಶ್ವರ ದೇವಾಲಯದ ಮೇಲುಸ್ತುವಾರಿ ಸಮಿತಿಯ ಸದಸ್ಯರು ಮತ್ತು ಸ್ಥಳೀಯ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಇದೇ ವೇಳೆ ಶಾಸಕ ದಿನಕರ ಶೆಟ್ಟಿಯವರು, ಮಹಾಬಲೇಶ್ವರ ದೇವಾಲಯದ ಅಮೃತಾನ್ನ ಪ್ರಸಾದ ಭೋಜನದ ಪುನರಾರಂಭಕ್ಕೆ ಚಾಲನೆ ನೀಡಿದರು. ಕೋವಿಡ್ ಹಿನ್ನಲೆಯಲ್ಲಿ ಕಳೆದ ಹಲವಾರು ತಿಂಗಳಿನಿAದ ಅಮೃತಾನ್ನ ಪ್ರಸಾದ ಭೋಜನ ವ್ಯವಸ್ಥೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಕೋವಿಡ್ ಕಡಿಮೆಯಾಗುತ್ತಿದ್ದು, ಭಕ್ತರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಹೀಗಾಗಿ ಭಕ್ತರಿಗೆ ಅನುಕೂಲವಾಗುವ ಉದ್ದೇಶದಿಂದ ಅಮೃತಾನ್ನವನ್ನು ಮತ್ತೆ ಆರಂಭಿಸಲಾಗಿದೆ.

ವಿಸ್ಮಯ ನ್ಯೂಸ್, ಗೋಕರ್ಣ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Exit mobile version