ದೇವರ ದರ್ಶನಕ್ಕೆ ಹೊರಟಿದ್ದ ಟೆಂಪೋ ಪಲ್ಟಿ: ಐದಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಭಟ್ಕಳ: ದೇವರ ದರ್ಶನಕ್ಕೆ ಹೊರಟಿದ್ದ ಟೆಂಪೋವೊoದು ಪಲ್ಟಿಯಾಗಿ ಹಲವರಿಗೆ ಗಾಯಗಾಳಾಗಿರುವ ಘಟನೆ ಇಲ್ಲಿನ ಸರ್ಪನಕಟ್ಟೆಯ ಹುಲಿದೇವರ ಮನೆ ಸಮೀಪ ನಡೆದಿದೆ. ಟೆಂಪೋ ಪಲ್ಟಿಯಾದ ತಕ್ಷಣ ಸ್ಥಳದಲ್ಲಿ ಸೇರಿದ ಸಾರ್ವಜನಿಕರು, ಗಾಯಗೊಂಡವರನ್ನು ಟೊಂಪೋದoದ ಹೊರಗೆ ತೆಗೆಯಲು ಹಾಗೂ ಆಸ್ಪತ್ರೆ ಸೇರಿಸಲು ಸಹಕರಿಸಿದರು.

ತಮಿಳುನಾಡಿನಿಂದ ಹೊರಟು ಕೊಲ್ಲೂರು ದರ್ಶನ ಮುಗಿಸಿ ಮುರ್ಡೇಶ್ವರಕ್ಕೆ ಹೋಗುತ್ತಿದ್ದ ಮಹೀಂದ್ರ ಟೆಂಪೋ ಪಲ್ಟಿಯಾಗಿದ್ದು, ಇವರಲ್ಲಿ ಟೆಂಪೋದಲ್ಲಿದ್ದ ಐದಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಇನ್ನುಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಂಭೀರವಾಗಿ ಗಾಯಗೊಂಡವರನ್ನು ಸರ್ಕಾರಿ ಆಸ್ಪತ್ರೆಗೆ ಸೇರಿಸಿ, ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅರೆಬರೆ ಹೆದ್ದಾರಿ ಕಾಮಗಾರಿಯೇ ಈ ಎಲ್ಲಾ ಅವಾಂತರಕ್ಕೆ ಕಾರಣವಾಗಿದೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ವಿಸ್ಮಯ ನ್ಯೂಸ್, ಭಟ್ಕಳ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Exit mobile version