Important
Trending

ಕ್ಷುಲ್ಲಕ ವಿಷಯಕ್ಕೆ ತಂದೆಯನ್ನೇ ಕೊಂದ ಮಗ: ಬೆಚ್ಚಿಬಿದ್ದ ಜನತೆ

ಕುಮಟಾ: ಸಣ್ಣ ವಿಷಯಕ್ಕೆ ಮಗ ಅಪ್ಪನನ್ನೇ ಕೊಚ್ಚಿ ಕೊಲೆ ಮಾಡಿದ್ದು, ಸಾರ್ವಜನಿಕರು ಬೆಚ್ಚಿ ಬೀಳುವಂತೆ ಮಾಡಿದೆ. ಕುಡಿದು ಬಂದು ಸಣ್ಣ ವಿಷಯಕ್ಕೆ ಅಪ್ಪ ಅಮ್ಮನೊಂದಿಗೆ ಜಗಳವಾಡುತ್ತಿದ್ದ ಮಗ ಎಂದು ತಿಳಿದುಬಂದಿದೆ.

ಪ್ರತಿ ದಿನವು ಸಂಜೆಯ ಹೊತ್ತಿಗೆ ಕುಡಿದ ಹೊತ್ತಿನಲ್ಲೇ ಮಗ ಮನೆಗೆ ಬರುತ್ತಿದ್ದ. ಅದರಂತೆ ನಿನ್ನೆಯೂ ಕುಡಿದ ಅಮಲಿನಲ್ಲೇ ಮನೆಗೆ ಬಂದಿದ್ದು ಗೇಡಿನ ಸರಗೋಲನ್ನ ಯಾಕೆ ಹಾಕಿದ್ದೀರಿ ಎಂದು ತಗಾದೆ ತೆಗೆದು, ಮನೆಯವರೊಂದಿಗೆ ಜಗಳ ಆರಂಭಿಸಿದ್ದಾನೆ ಎನ್ನಲಾಗಿದೆ. ಇದೇ ಕಾರಣಕ್ಕೆ ಅಪ್ಪ ಮಗನ ಮಧ್ಯೆ ಜಗಳ ಆರಂಭವಾಗಿದೆ. ಪ್ರತಿದಿನ ಕುಡಿದು ಬಂದು ಜಗಳ ಮಾಡಿದರೆ ನಿನ್ನನ್ನ ಸಾಯಿಸಿ ಬಿಡುತ್ತೆನೆ ಎಂದು ಅಪ್ಪ ಹೆಳಿದ್ದಕ್ಕೆ ಸಿಟ್ಟಿಗೆದ್ದ ಮಗ , ಅಲ್ಲೆ ವರಾಂಡಾದಲ್ಲಿದ್ದ ಕತ್ತಿಯಿಂದ ಹಲ್ಲೆ ಮಾಡಿದ್ದಾನೆ. ತಂದೆ ಅಲ್ಲೇ ಪ್ರಾಣ ಬಿಟ್ಟಿದ್ದಾನೆ.

55 ವರ್ಷದ (ಅಪ್ಪ)ರಾಮಚಂದ್ರ ಕುಪ್ಪು ಗೌಡ ಮೃತ ದುರ್ದೈವಿ. 31 ವರ್ಷದ ಶ್ರೀಕಾಂತ ರಾಮಚಂದ್ರ ಗೌಡ ಕೊಲೆ ಮಾಡಿದ ಆರೋಪಿ. ತಾಯಿ ಸುಮಿತ್ರಾ ರಾಮಚಂದ್ರ ಗೌಡಾ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ವಿಸ್ಮಯ ನ್ಯೂಸ್, ಕುಮಟಾ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button