Follow Us On

WhatsApp Group
Important
Trending

ರಾಣಿ ಚೆನ್ನಾಭೈರಾದೇವಿ ಥೀಮ್ ಪಾರ್ಕ್ ಹೊನ್ನಾವರದಲ್ಲಿ ನಿರ್ಮಾಣ: ಸ್ಥಳ‌ ಪರಿಶೀಲನೆ‌ ನಡೆಸಿದ ಡಾ.ವೀರೇಂದ್ರ ಹೆಗ್ಗಡೆ

ಹೊನ್ನಾವರ: ಕಾಳು ಮೆಣಸಿನ ರಾಣಿ ಎಂದು ಖ್ಯಾತಿ ಪಡೆದಿರುವ ರಾಣಿ ಚೆನ್ನಾಭೈರಾದೇವಿ ಥೀಮ್ ಪಾರ್ಕ್ ಹೊನ್ನಾವರದಲ್ಲಿ ನಿರ್ಮಾಣ ಮಾಡುವ ದೃಷ್ಟಿಯಿಂದ ಈಗಾಗಲೆ ಸಮಿತಿ ರಚಿಸಲಾಗಿದೆ. ಈ ಸಂಬಂಧ ಡಾ.ವೀರೇಂದ್ರ ಹೆಗ್ಗಡೆಯವರು ಸ್ಥಳ ವೀಕ್ಷಣೆ ಮಾಡಿದರು.

ಹೊನ್ನಾವರ ತಾಲೂಕಿನಲ್ಲಿ ಕಾಸರಕೊಡ ಇಕೋ ಬೀಚ್‌ಗೆ ಆಗಮಿಸಿ ಸ್ಥಳ ವೀಕ್ಷಣೆ ನಡೆಸಿದರು. ಕಾಸರಕೋಡ ಫಾರೆಸ್ಟ್ ಬಂಗಲೆಯಲ್ಲಿ ಅಧಿಕಾರಿಗಳು ಮತ್ತು ಮುಖಂಡರೊಂದಿಗೆ ಸಮಾಲೋಚನೆ ನಡೆಸಿದ್ದು, ಚೆನ್ನಾಭೈರಾದೇವಿ ಗತ ವೈಭವ ಚಿತ್ರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ಕಾಸರಕೋಡನಲ್ಲಿ ಕಾಂಡ್ಲಾವನ ನಡುಗೆಯ ಬಗ್ಗೆ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತ ಪಡಿಸಿದರು. ಸೆಮಿನಾರ್ ಮೊದಲು ನಡೆಸಿ ನಂತರ ಪಾರ್ಕ್ ನಿರ್ಮಾಣಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ.

ಈ ಸಂದರ್ಭದಲ್ಲಿ ಡಿ.ಎಫ್ ಓ ಗಣಪತಿ ನಾಯ್ಕ, ಉದ್ಯಮಿ ಮುರಳಿದರ ಪ್ರಭು, ಹಿರಿಯ ಪತ್ರಕರ್ತ ಜಿ.ಯು ಭಟ್ಟ, ಚಂದ್ರಶೇಖರ ಗೌಡ ಮುಂತಾದ ಗಣ್ಯರು ಇದ್ದರು.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button