ಸಿದ್ದರಾಮಯ್ಯನವರು ಅಲ್ಪಸಂಖ್ಯಾತರ ಮತಕ್ಕಾಗಿ ಜೊಲ್ಲು ಸುರಿಸುತ್ತಾರೆ: ಗೃಹ ಸಚಿವ ಆರಗ ಜ್ಞಾನೇಂದ್ರ ತಿರುಗೇಟು

ಗೋಕರ್ಣ: ಸಿದ್ದರಾಮಯ್ಯನವರು ಅಲ್ಪಸಂಖ್ಯಾತರ ಮತಕ್ಕಾಗಿ ಜೊಲ್ಲು ಸುರಿಸುತ್ತಿರುವುದು ಬಿಟ್ಟರೆ ಬೇರೇನಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಚಾಟಿ ಬೀಸಿದ್ದಾರೆ. ಇಲ್ಲಿನ ಮಹಾಬಲೇಶ್ವರ ದೇವಸ್ಥಾನಕ್ಕೆ ಆಗಮಿಸಿದ್ದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಆರ್‌ಎಸ್‌ಎಸ್ ಬಗ್ಗೆ ಎಷ್ಟು ಕೆಳಮಟ್ಟದಲ್ಲಿ ಮಾತನಾಡುತ್ತಾರೋ, ಅಷ್ಟು ಅಲ್ಪಸಂಖ್ಯಾತರ ಮತ ಬೀಳುತ್ತವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಭಾವಿಸಿದ್ದಾರೆ. ಆದರೆ ಅದ್ಯಾವುದೂ ಸಿಗುವುದಿಲ್ಲ. ಇದೆಲ್ಲ ಅವರ ಭ್ರಮೆ ಅಷ್ಟೇ. ಆರ್‌ಎಸ್‌ಎಸ್ ಅನ್ನು ದೂರಿದಷ್ಟು ಅವರೇ ಕಳೆದು ಹೋಗುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ.

ಸ್ವಯಂ ಯೋಗ್ಯತೆ ಇಲ್ಲದಿದ್ದರೂ ಕಾಂಗ್ರೆಸ್ ಅಧ್ಯಕ್ಷರಾಗಿ ಬಂದವರಿದ್ದಾರೆ. ರಾಜೀವ್ ಗಾಂಧಿ, ಸೋನಿಯಾ ಗಾಂಧಿ, ಅವರ ಪುತ್ರನಿಗೆ ಏನೂ ಅರ್ಹತೆ ಇಲ್ಲದಿದ್ದರೂ ಬಂದು ಬಿಡುತ್ತಾರೆ. ಆದರಂತೆ ಮಗ ಎನ್ನುವ ಕಾರಣಕ್ಕೆ ಅರ್ಹತೆ, ಯೋಗ್ಯತೆ ಇದ್ದವರು ಮೂಲೆಗುಂಪು ಸಹ ಆಗಬಾರದು. ಸೇವಾ ಮನೋಭಾವ, ರಾಜಕೀಯ ಆಸಕ್ತಿ ಹಾಗೂ ಜ್ಞಾನ ಇರೋರಿಗೆ ಉತ್ತಮ ಸ್ಥಾನ ನೀಡಲಿ ಎಂದರು.

ನಮ್ಮ ಬಗ್ಗೆ ಮಾತನಾಡುವವರು ಸೈದ್ಧಾಂತಿಕವಾಗಿ ಪಕ್ಷ ಕಟ್ಟಲಿ, ಹೋರಾಟ ಮಾಡಲಿ. ಅದನ್ನು ಬಿಟ್ಟು ಜಾತಿ ಹೆಸರಲ್ಲಿ ಕೇವಲ ಮೇಲೆಬ್ಬಿಸಿ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಜಾತಿಯಲ್ಲಿ ಎಲ್ಲರ ಉದ್ಧಾರನೂ ಮಾಡಲ್ಲ, ಇವರ ಉದ್ಧಾರಕ್ಕೋಸ್ಕರ ಜಾತಿಯನ್ನು ಎಬ್ಬಿಸ್ತಾರೆ ಎಂದರು.

ಇನ್ನು ಇತ್ತೀಚೆಗೆ ಪೊಲೀಸ್ ಠಾಣೆಯಲ್ಲಿ ಕೇಸರಿ ಧರಿಸಿದ್ದಕ್ಕೆ ಸಿದ್ದರಾಮಯ್ಯ ಟೀಕೆ ಮಾಡಿದ್ದರು. ಏನು ಕೇಸರಿ ಬ್ಯಾನ್ ಆಗಿದ್ಯಾ? ಅಥವಾ ಯಾವುದೋ ಪಕ್ಷಕ್ಕೆ ಸೀಮಿತವಾಗಿದ್ಯಾ? ಎಂದು ಪ್ರಶ್ನಿಸಿದ ಸಚಿವರು, ಇವರು ನಾಳೆ ರಾಷ್ಟ್ರಧ್ವಜದ ಕೇಸರಿ ತೆಗೆದು ಬರೀ ಹಸಿರು ಇದ್ದರೆ ಸಾಕು ಎನ್ನಬಹುದು ಎಂದು ವಾಗ್ದಾಳಿ ನಡೆಸಿದರು.

ವಿಸ್ಮಯ ನ್ಯೂಸ್, ಗೋಕರ್ಣ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Exit mobile version