Follow Us On

WhatsApp Group
Important
Trending

ಕುಮಟಾದ ಅರಣ್ಯಪ್ರದೇಶದಲ್ಲಿ ಬಾಂಬ್ ರೀತಿಯ ವಸ್ತು ಪತ್ತೆ: ಆತಂಕದ ವಾತಾವರಣ

ಸ್ಥಳಕ್ಕೆ ಪೊಲೀಸರ ಭೇಟಿ: ಶ್ವಾನದಳ ಆಗಮನ

ಕುಮಟಾ: ಪಟ್ಟಣ ಸಮೀಪದ ಅರಣ್ಯ ಪ್ರದೇಶದಲ್ಲಿ ಸ್ಪೋಟಕದಂತಿರುವ ವಸ್ತು ಪತ್ತೆಯಾದ ಸುದ್ದಿ ಸಾರ್ವಜನಿಕರನ್ನ ಬೆಚ್ಚಿ ಬೀಳಿಸಿದೆ.

ವಿದ್ಯಾಧೀರಾಜ ಪಾಲಿಟೆಕ್ನಿಕ್ ಕಾಲೇಜ್‌ ಸಮೀಪದ ಹಿಂಭಾಗದ ಅರಣ್ಯಪ್ರದೇಶದಲ್ಲಿ ಬಾಂಬ್ ಹೋಲುವ ವಸ್ತು, ಪತ್ತೆಯಾಗಿದೆ.. ಸ್ಥಳಕ್ಕೆ ಪೋಲೀಸರು ಆಗಮಿಸಿದ್ದು, ಶೋಧ ಕಾರ್ಯ ನಡೆಸಿದ್ದಾರೆ.

ವಾಯು ವಿಹಾರಕ್ಕೆ ಆಗಮಿಸಿದ ಕೆಲ ವ್ಯಕ್ತಿಗಳು ಬಾಂಬ್ ರೂಪದಲ್ಲಿರುವ ವಸ್ತುವನ್ನು ಗಮನಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು, ತನಿಖೆ ಆರಂಭಿಸಿದ್ದಾರೆ.

ಅರಣ್ಯ ಪ್ರದೇಶದಲ್ಲಿ ಪತ್ತೆಯಾದ ವಸ್ತು ಬಾಂಬ್ ತರನೇ ಕಾಣುತ್ತಿದ್ದು, ಬಾಂಬ್‌ಗೆ ಅಳವಡಿಸಲಾಗುವ ವೈಯರ್ ಕೂಡ ಇದೆ ಎನ್ನಲಾಗಿದೆ. ಅಗ್ನಿ ಶಾಮಕ ದಳ ಸೇರಿದಂತೆ ಶ್ವಾನ ದಳ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ.

ಆದರೆ ಇದು ಸ್ಪೋಟಕವೇ? ನಾಡಬಾಂಬೆ? ಅಥವಾ ಅಸಲಿಗೇ ಬಾಂಬ್ ಇರಬಹುದೆ ಎಂಬುದನ್ನು ಪೊಲೀಸರೇ ಖಚಿತ ಪಡಿಸಬೇಕಿದೆ. ಆದರೆ , ಸ್ಪೋಟಕದಂತ ವಸ್ತು ದೊರೆತ ಸ್ಥಳ ಕಾಲೇಜಿನಿಂದ ದೂರ ಇದೆ ಎಂಬ ಮಾಹಿತಿ ಲಭ್ಯವಾಗಿದೆ. ಸಂಶಯಾಸ್ಪದವಾಗಿ ತಿರುಗಾಡುತ್ತಿರುವವರನ್ನು ವಿಚಾರಣೆ ನಡೆಸಲಾಗುತ್ತಿದೆ.

ಸಿಲೆಂಡರ್ ಬ್ಯಾಟರಿ ಶಲ್ ಗಳು ಇದರಲ್ಲಿ ಇದ್ದು ಇದು ನಕಲಿ ಬಾಂಬ್ ಆಗಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ಇಂಥ ವಸ್ತು ಯಾಕೆ ಇಲ್ಲಿ ಪತ್ತೆಯಾಗಿದೆ ಎಂಬುದು‌ ತನಿಖೆಯಿಂದ ತಿಳಿದುಬರಬೇಕಿದೆ.ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ಬಾಂಬ್ ನಿಷ್ಕ್ರಿಯ ದಳ ಆಗಮಿಸುತ್ತಿದೆ ಎನ್ನಲಾಗಿದೆ.

ವಿಸ್ಮಯ‌ ನ್ಯೂಸ್ ಕುಮಟಾ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button