Follow Us On

WhatsApp Group
Focus News
Trending

ದ್ವಿಚಕ್ರ ವಾಹನಕ್ಕೆ ಬಡಿದ ಅಪರಿಚಿತ ಟಿಪ್ಪರ್: ರಸ್ತೆ ಬದಿಗೆ ಉರುಳಿಬಿದ್ದು ಬೈಕ್ ಸವಾರನಿಗೆ ಗಾಯ


ದಾಂಡೇಲಿ: ಅಪರಿಚಿತ ಟಿಪ್ಪರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿಹೊಡೆದ ಪರಿಣಾಮ ಸವಾರ ಗಾಯಗೊಂಡ ಘಟನೆ ತಾಲೂಕಿನ ತಾಟಗೇರ ಸಮೀಪ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಹಳಿಯಾಳ ಕಡೆಯಿಂದ ದಾಂಡೇಲಿಗೆ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಅಪರಿಚಿತ ಟಿಪ್ಪರ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬೈಕ್ ಸವಾರನ ಬಲಗಾಲು ಮತ್ತು ಬಲಗೈಗೆ ಗಂಭೀರಗಾಯವಾಗಿದೆ. ಹಿಂಬದಿಯಿದ್ದ ಮಹಿಳೆಗೂ ಸಣ್ಣಪುಟ್ಟ ಗಾಯವಾಗಿದೆ.

ಹೌದು, ಅಂಬೇವಾಡಿ, ಗಾವಠಾಣ ನಿವಾಸಿ ನಾಗು ಕೊಂಡು ಬಿಚ್ಚುಕಳೆ ಗೌಳಿಗೆ (೪೫) ಬಲಗಾಲಿಗೆ ಮತ್ತು ಬಲಗೈಗೆ ಗಂಭೀರ ಗಾಯವಾಗಿದೆ. ದ್ವಿಚಕ್ರ ವಾಹನದ ಹಿಂಬದಿಯಲ್ಲಿದ್ದ ಆತನ ಪತ್ನಿಬೊಮ್ಮಿಬಾಯಿ ನಾಗು ಬಿಚ್ಚುಕಳೆ ಎಂಬವರಿಗೆ ಸಣ್ಣಪುಟ್ಟಗಾಯವಾಗಿದೆ. ಅಪಘಾತ ನಡೆದ ಸ್ವಲ್ಪ ಹೊತ್ತಿನಲ್ಲಿ ದಾಂಡೇಲಿಗೆ ಬರುತ್ತಿದ್ದ ವಿಧಾನಪರಿಷತ್ ಸದಸ್ಯ ಎಸ್.ಎಲ್. ಘೋಟೇಕರ ತಮ್ಮ ವಾಹನ ನಿಲ್ಲಿಸಿ, ತಕ್ಷಣ ಗ್ರಾಮೀಣ ಠಾಣೆ ಪಿಎಸಗೆ ಕರೆ ಮಾಡಿ ಮಾಹಿತಿ ತಿಳಿಸಿ, ಆಸ್ಪತ್ರೆಗೆ ಸೇರಿಸಿದ್ದಾರೆ.

ವಿಸ್ಮಯ ನ್ಯೂಸ್, ದಾಂಡೇಲಿ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button