Follow Us On

WhatsApp Group
Focus News
Trending

ಪೆಟ್ರೋಲ್ ಬಂಕ್ ಕಟ್ಟೆಯ ಮೇಲೆಯೇ ವ್ಯಕ್ತಿ ಸಾವು: ಸ್ಥಳದಲ್ಲಿ ಗೊಂದಲ: ಕಾರಣ ನಿಗೂಢ?

ಕಾರವಾರ: ಇಲ್ಲಿನ ಬಸ್ ನಿಲ್ದಾಣ ಸಮೀಪದ ಪೆಟ್ರೋಲ್ ಬಂಕ್ ಕಟ್ಟೆಯ ಮೇಲೆ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ. ರಾಮಚಂದ್ರ ಗೋವಿಂದ ಪೂಜಾರಿ ಮೃತಪಟ್ಟ ವ್ಯಕ್ತಿ ಎಂದು ತಿಳಿದುಬಂದಿದೆ. ಈತನ ಬಳಿಯಿರುವ ದಾಖಲೆಗಳಿಂದ ಈತ ಮಹಾರಾಷ್ಟ್ರ ಮೂಲದವ ಎಂದು ತಿಳಿದುಬಂದಿದೆ.

ಶವದ ಬಳಿ ಚೀಲ ದೊರೆತಿದ್ದು, ಇದರಲ್ಲಿನ ಆಧಾರ್ ಕಾರ್ಡ್ ನಲ್ಲಿ ಆತನ ಹೆಸರು ರಾಮಚಂದ್ರ ಪೂಜಾರಿ ಎಂದು ದಾಖಲಾಗಿದೆ. ಅಲ್ಲದೆ ಮೃತಪಟ್ಟ ವ್ಯಕ್ತಿ ಕಾರವಾರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ದಾಖಲೆಪತ್ರ ಕೂಡ ಸಿಕ್ಕಿದೆ. ಪೊಲೀಸರು ಸ್ಥಳಕ್ಕೆ ಬಂದು ಪಂಚನಾಮೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ವಿಸ್ಮಯ ನ್ಯೂಸ್, ಕಾರವಾರ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button