S P ಶಿವಪ್ರಕಾಶ ದೇವರಾಜು ವರ್ಗಾವಣೆ: ಜಿಲ್ಲೆಗೆ ನೂತನ ಎಸ್ಪಿಯಾಗಿ ಬರಲಿರುವ ಮಹಿಳಾ ಅಧಿಕಾರಿ ? ಗದಗ, ಮಂಡ್ಯ ಹಾಗೂ ಉತ್ತರ ಕನ್ನಡ ಅಧಿಕಾರಿಗಳ ತ್ರಿಕೋನ ವರ್ಗಾವಣೆ .

ಅಂಕೋಲಾ: ಪೊಲೀಸ್ ಇಲಾಖೆಯಲ್ಲಿ ವಿವಿಧ ಹಂತದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ವರ್ಗಾವಣೆ ನಡೆಯುತ್ತಿದ್ದು ಅದರ ಮುಂದುವರಿದ ಭಾಗವಾಗಿ ಹಿರಿಯ ಅಧಿಕಾರಿಗಳ ವರ್ಗಾವಣೆಯೂ ಆರಂಭಗೊಂಡಿದೆ. ಜಿಲ್ಲೆಯ ಮಟ್ಟಿಗೆ ಹೇಳುವುದಾದರೆ,ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ  ಶಿವಪ್ರಕಾಶ್ ದೇವರಾಜು  ಅವರನ್ನು ಗದಗ ಜಿಲ್ಲೆಗೆ ವರ್ಗಾಯಿಸಲಾಗಿದ್ದು,ಉತ್ತರಕನ್ನಡಕ್ಕೆ ನೂತನ ಎಸ್ಪಿಯಾಗಿ ಮಹಿಳಾ ಅಧಿಕಾರಿ ಸುಮನ್ ಡಿ ಪೆನ್ನೇಕರ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ.           

ಕಳೆದ  ಜುಲೈ ವೇಳೆಯೇ ಎಸ್ಪಿ ಶಿವಪ್ರಕಾಶ್ ದೇವರಾಜು ವರ್ಗಾವಣೆಗೊಂಡು,ಅವರ ಸ್ಥಾನದಲ್ಲಿ ವರ್ತಿಕಾ ಕಟಿಯಾರ್ ಎನ್ನುವ ಮಹಿಳಾ ಅಧಿಕಾರಿ ಅಧಿಕಾರ ಸ್ವೀಕರಿಸಲಿದ್ದಾರೆ ಎನ್ನಲಾಗಿತ್ತು.ನಂತರ ಆ ವರ್ಗಾವಣೆ ಆದೇಶ ತಾತ್ಕಾಲಿಕವಾಗಿ ಸ್ಥಗಿತಗೊಂಡಿತ್ತು. ಸರ್ಕಾರದ ನೂತನ ಆದೇಶದಂತೆ ರಾಜ್ಯದ ವಿವಿಧ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದ್ದು,ಹೊಸ ವರ್ಗಾವಣೆ ಪಟ್ಟಿಯಲ್ಲಿ ಶಿವಪ್ರಕಾಶ್ ದೇವರಾಜ ಜು ಅವರಿಗೆ ಗದಗ ಜಿಲ್ಲೆಗೆ ವರ್ಗಾಯಿಸಲಾಗಿದೆ.ಗದಗ ಜಿಲ್ಲೆ ಎಸ್ಪಿಯಾಗಿದ್ದ ಯತೀಶ ಅವರನ್ನು ಮಂಡ್ಯ ಜಿಲ್ಲೆಗೂ, ಮಂಡ್ಯದ ಎಸ್ಪಿ ಆಗಿದ್ದ ಸುಮನ ಡಿ ಪೆನ್ನೇಕರ ಅವರನ್ನು ಉತ್ತರ ಕನ್ನಡ ಜಿಲ್ಲೆಗೆ ವರ್ಗಾಯಿಸಲಾಗಿದೆ.         

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Exit mobile version