Follow Us On

WhatsApp Group
Important
Trending

ಅತಿವೇಗವಾಗಿ ಬಂದು ಎರಡು ಬೈಕ್ ಗೆ ಗುದ್ದಿದ ಕಾರು: ನಾಲ್ವರಿಗೆ ಗಂಭೀರ ಗಾಯ

ಹೊನ್ನಾವರ: ಕಾರೊಂದು ಎರಡು ಬೈಕ್ ಗೆ ಡಿಕ್ಕಿಹೊಡೆದು ನಾಲ್ವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 69ರ ಹೊನ್ನಾವರ ತಾಲೂಕಿನ ಖರ್ವಾ ಕ್ರಾಸ್ ಸಮೀಪ ನಡೆದಿದೆ. ಕಾರ್ ಚಾಲಕನ ಅಜಾಗರೂಕತೆಯ ಚಾಲನೆಯಿಂದ ಎರಡು ಬೈಕ್ ಗೆ ಡಿಕ್ಕಿ ಸಂಭವಿಸಿ ಸವಾರರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರು ಚಾಲಕ ಬೆಂಗಳೂರಿನ ನಾಗದೇವನಹಳ್ಳಿಯ ಅಜೇಯ ಚಂದ್ರಶೇಖರ ಕೆ.ಎಂ ವಿರುದ್ಧ ಪ್ರಕರಣ ದಾಖಲಾಗಿದೆ.

ಗೇರುಸೊಪ್ಪಾದಿಂದ ಹೊನ್ನಾವರ ಮಾರ್ಗವಾಗಿ ಅತಿವೇಗ ಹಾಗು ನಿರ್ಲಕ್ಷತನದಿಂದ ಚಲಾಯಿಸಿ ಕೊಂಡು ಬಂದು ಖರ್ವಾ ಕ್ರಾಸ್ ಹತ್ತಿರ ಒಮ್ಮೆಲೆ ಕಾರನ್ನು ತನ್ನ ಬಲಬದಿಗೆ ಚಲಾಯಿಸಿ ಎರಡು ಬೈಕ್ ಗಳಿಗೆ ಗುದ್ದಿದ್ದಾನೆ. ಬೈಕ್ ಸವಾರಾದ ತಾಲೂಕಿನ ಹೆರಂಗಡಿಯವರಾದ ಜುಲಫಿಕರ್ ಖಾಜಾ ಜುವಾಪು ಜಾಯಿಖಾಜಾ ಅಪ್ಕರ್ ಹಾಗೂ, ಗದಗ ಜಿಲ್ಲೆಯ ಹೊಸಳ್ಳಿಯ ಶಿವಯ್ಯ ಮಹಾಲಿಂಗಯ್ಯಗಣಾಚಾರಿ ಮತ್ತು ಕಾರ್ ನಲ್ಲಿದ್ದ ದೀಕ್ಷಿತ್ ಪ್ರಭು ಲಗ್ಗೆರೆ ಬೆಂಗಳೂರು ಹಾಗೂ ಕಾರು ಚಾಲಕನಿಗೆ ಗಂಭೀರ ಗಾಯವಾಗಿದೆ. ಎರಡು ಬೈಕ್ ಹಾಗೂ ಕಾರು ಜಖಂ ಆಗಿದೆ. ಈ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button