Follow Us On

WhatsApp Group
Important
Trending

ಕಾರಿನಲ್ಲಿ ಬಂದು ದಾರಿ ಕೇಳುವ ನೆಪ ಮಾಡಿಕೊಂಡು ಮಹಿಳೆಯ ಸರ ದೋಚಿ ಪರಾರಿಯಾದ ದುಷ್ಕರ್ಮಿಗಳು

ಶಿರಸಿ : ದಾರಿ ಕೇಳುವ ನೆಪ ಮಾಡಿಕೊಂಡ ದುಷ್ಕರ್ಮಿಗಳು ಮಹಿಳೆಯ ಬಂಗಾರದ ಸರ ದೋಚಿ ಪರಾರಿಯಾದ ಘಟನೆ ಇಲ್ಲಿನ‌ ಭತ್ತದ ಓಣಿಯಲ್ಲಿ ನಡೆದಿದೆ.

ಹೌದು, ನಡೆದುಕೊಂಡು ಹೋಗುತ್ತಿದ್ದ ಒಂಟಿ ಮಹಿಳೆಯ ಬಿಳಿ ಕಾರಿನಲ್ಲಿ ಬಂದ ದರೋಡೆಕೋರರು ಈ ಕೃತ್ಯ ಎಸಗಿದ್ದಾರೆ.‌ ಉಷಾ ದಾಮೋದರ ಪೈ ಬಂಗಾರದ ಸರ ಕಳೆದುಕೊಂಡ ಮಹಿಳೆ. ಆರೋಪಿಗಳು ಕುಮಟಾಕ್ಕೆ ಹೋಗುವ ಮಾರ್ಗ ಕೇಳುವ ನೆಪದಲ್ಲಿ ಕಾರು ನಿಲ್ಲಿಸಿ ಮಹಿಳೆ ಬಳಿ ಕೇಳಿ ಮಹಿಳೆಯ ಕುತ್ತಿಗೆಯಲ್ಲಿದ್ದ ಸರ ಹರಿದು ಪರಾರಿಯಾಗಿದ್ದಾರೆ.

ಈ ಬಂಗಾರದ ಸರದ ಅಂದಾಜು ಮೌಲ್ಯ 1 ಲಕ್ಷಕ್ಕೂ ಅಧಿಕ‌ ಎನ್ನಲಾಗಿದೆ, ಸಿ.ಪಿ.ಐ. ರಾಮಚಂದ್ರ ನಾಯಕ್ ನೇತೃತ್ವದಲ್ಲಿ ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚನೆ ಮಾಡಲಾಗಿದೆ.

ವಿಸ್ಮಯ ನ್ಯೂಸ್ ಶಿರಸಿ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button