Important
Trending

ಕಾಲೇಜಿಗೆ ಹೋಗುತ್ತಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ, ಪೀಡಿಸುತ್ತಿದ್ದ ಯುವಕನಿಗೆ ಬುದ್ಧಿ ಕಲಿಸಿದ ಪೊಲೀಸರು

ಶಿರಸಿ: ಕಾಲೇಜಿಗೆ ಹೊಗುತ್ತಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ, ಪೀಡಿಸುತ್ತಿದ್ದ ಯುವಕನಿಗೆ ಪೊಲೀಸರು ಬುದ್ದಿ ಕಲಿಸಿದ್ದಾರೆ. ಹೌದು, ಕಳೆದ 15 ದಿನಗಳಿಂದ ಹಿಂಬಾಲಿಸುವುದು,ಪ್ರಿತಿಸುತ್ತೇನೆ ಎಂದು ಅವಳ ಹೆಸರನ್ನು ಜೊರಾಗಿ ಕೂಗುತ್ತಾ ಯುವಕ ವರ್ತಿಸುತ್ತಿದ್ದ ಎನ್ನಲಾಗಿದ್ದು, ಇದೀಗ ಪೋಲಿಸರ ಅತಿಥಿಯಾಗಿದ್ದಾನೆ.

ಮುಂಜಾನೆ ವಿದ್ಯಾರ್ಥಿನಿ ಕಾಲೇಜಿಗೆ ಹೋಗುತ್ತಿರುವಾಗ ಬೈಕ್ ಮೆಲೆ ಬಂದ ಆರೋಪಿ ನವೀನ್ ಎಂಬಾತ ವಿದ್ಯಾರ್ಥಿನಿಯನ್ನು ಹಿಂಬಾಲಿಸುತ್ತಾ ಪೀಡಿಸುತ್ತಿದ್ದ. ಸಾಕಷ್ಟು ಬಾರಿ ಎಚ್ಚರಿಕೆ ನೀಡಿದ್ದರು, ಮತ್ತದೇ ವರ್ತನೆಯನ್ನು ಮುಂದುವರಿಸಿದ್ದ. ಪೊಲೀಸರಿಗೆ ಮಾಹಿತಿ ತಿಳಿಸಲಾಗಿದ್ದು, ಇದೀಗ ಪೋಲಿಸರ ಅತಿಥಿಯಾಗಿದ್ದಾನೆ. ಬನವಾಸಿ ಭಾಗದ ಕುಡಿಗೇರಾ ಗ್ರಾಮದ ನವೀನ ಶಿವಪ್ಪ ನಾಯ್ಕ ವಿರುದ್ಧ ಬನವಾಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಶಿರಸಿ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button