Focus News
Trending

ಎಸ್ ಡಿ ಎಮ್ ಕಾಲೇಜಿನ ಎಂ.ಪಿ.ಇ. ಸೊಸೈಟಿಯ ನೂತನ ಅಧ್ಯಕ್ಷರಾಗಿ ಶಿಕ್ಷಣಪ್ರೇಮಿ ಕೃಷ್ಣಮೂರ್ತಿ ಭಟ್ಟ ಶಿವಾನಿ ಅವಿರೊಧವಾಗಿ ಆಯ್ಕೆ

ಹೊನ್ನಾವರ: ಪಟ್ಟಣದ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಯಾ ಎಸ್ ಡಿ ಎಮ್ ಕಾಲೇಜು ಎಂ.ಪಿ.ಇ. ಸೋಸೈಟಿ ಮಂಡಳಿಯ ನೂತನ ಅಧ್ಯಕ್ಷರಾಗಿ, ಸರಳ-ಸಜ್ಜನರು, ಶಿಕ್ಷಣಪ್ರೇಮಿ ಕೃಷ್ಣಮೂರ್ತಿ ಭಟ್ಟ ಶಿವಾನಿಯವರನ್ನು ಇತ್ತೀಚೆಗೆ ನಡೆದ ಎಂ.ಪಿ.ಇ. ಸೊಸೈಟಿಯ ಆಡಳಿತ ಮಂಡಳಿಯ ವಿಶೇಷ ಸರ್ವಸದಸ್ಯರ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಡಾ. ಎಂ.ಪಿ. ಕರ್ಕಿ ಅವರ ನಿಧನದಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಪ್ರಸ್ತುತ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದ ಕೃಷ್ಣಮೂರ್ತಿ ಭಟ್ಟ ಶಿವಾನಿ ಅವರನ್ನು ಅವಿರೋಧವಾಗಿ ಆಯ್ಕೆಮಾಡಲಾಗಿದೆ.

ಕೃಷ್ಣಮೂರ್ತಿ ಭಟ್ಟ ಶಿವಾನಿಯವರು ವಿವಿಧ ಸಾಮಾಜಿಕ ಸೇವೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡವರು. ಹೊನ್ನಾವರ ಲಯನ್ಸ್ ಕ್ಲಬ್‌ನ ಅಧ್ಯಕ್ಷರಾಗಿ, ರೀಜನಲ್ ಚೇರ್‌ಮನ್ ಆಗಿ ಈ ಹಿಂದೆ ಸೇವೆ ಸಲ್ಲಿಸಿ, ಗಮನಸೆಳೆದಿದ್ದರು. ಅಲ್ಲದೆ, ಹೊನ್ನಾವರ ತಾಲೂಕಿನ ಸ್ಕೌಟ್ ಮತ್ತು ಗೈಡ್ಸ್ ಅಧ್ಯಕ್ಷರಾಗಿಯೂ ಸೇವೆಯಲ್ಲಿ ನಿರತರಾಗಿದ್ದಾರೆ. ಅಲ್ಲದೇ ಅಖಿಲ ಹವ್ಯಕ ಮಹಾಸಭಾ ಬೆಂಗಳೂರಿನ ನಿರ್ದೇಶಕರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದು, ಅಂಧರಿಗಾಗಿ ಶಿಕ್ಷಣ ನೀಡುತ್ತಿರುವ ಸಿದ್ದಾಪುರದ ಶಿಕ್ಷಣ ಸಂಸ್ಥೆಯಿoದ ‘ಸದ್ಭಾವನಾ’ ಪ್ರಶಸ್ತಿ ಪುರಸ್ಕೃತರಾದ ಇವರು ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಆಯ್ಕೆಗೊಂಡಿರುವುದಕ್ಕೆ , ಸಾರ್ವಜನಿಕರು ಉತ್ತಮ ಆಯ್ಕೆ ಎಂದು ಮೆಚ್ಚುಗೆಯ ಮಾತುಗಳನ್ನು ಮಾಡುತ್ತಿರುವುದು ಕೃಷ್ಣಮೂರ್ತಿ ಭಟ್ಟ ಅವರ ಜನಪ್ರಿಯತೆಗೆ ಸಾಕ್ಷಿ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

Back to top button