Follow Us On

WhatsApp Group
Important
Trending

ಬೈಕ್ ಮತ್ತು ಮಿನಿ ಲಾರಿ ನಡುವೆ ಡಿಕ್ಕಿ: ಬೈಕ್ ಸವಾರನಿಗೆ ಗಂಭೀರ ಗಾಯ

ಭಟ್ಕಳ:  ಬೈಕ್ ಮತ್ತು ಮಿನಿ ಲಾರಿ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಸಾಗರ ರಸ್ತೆಯಲ್ಲಿ  ನಡೆದಿದೆ.

ಗಾಯಗೊಂಡ ಬೈಕ್ ಸವಾರನನ್ನು ಪವನ್ ಮರಾಠಿ (29)ತಾಲೂಕಿನ ಅರುಕಿ ನಿವಾಸಿ ಎಂದು ತಿಳಿದು ಬಂದಿದೆ. ಭಟ್ಕಳದಿಂದ ತನ್ನ ಮನೆಗೆ ತೆರಳುವ ವೇಳೆ
ಸಾಗರ ರಸ್ತೆಯ  ಬಸ್ ಡಿಪೋ ಸಮೀಪ ಮುಂಭಾದಿಂದ ಬರುತ್ತಿದ್ದ ಮಿನಿ ಲಾರಿಗೆ ಬೈಕ್ ಸವಾರ ಡಿಕ್ಕಿ ಹೊಡೆದಿರುವ ಬಗ್ಗೆ ತಿಳಿದು ಬಂದಿದೆ.

ಢಿಕ್ಕಿ ರಭಸಕ್ಕೆ ಮಿನಿ ಲಾರಿ ರಸ್ತೆ ಪಕ್ಕದಲ್ಲಿ ಪಲ್ಟಿಯಾಗಿ ಬಿದಿದೆ. ಅಪಘಾತದಲ್ಲಿ ಪವನ್ ಮರಾಠಿ ಕೈಕಾಲುಗಳಿಗೆ ತೀವ್ರ ಗಾಯಗಳಾಗಿದ್ದು. ಘಟನೆ ನಡೆದ ತಕ್ಷಣ ಬೈಕ್ ಸವಾರನಿಗೆ ಭಟ್ಕಳ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ  ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಸ್ಮಯ ನ್ಯೂಸ್ ಉದಯ್ ಎಸ್ ನಾಯ್ಕ ಭಟ್ಕಳ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 988044653

Back to top button